Thursday, September 10, 2026
Thursday, September 10, 2026

ಗ್ರಾಮೀಣರಲ್ಲಿ ಸಾಂಸ್ಕೃತಿಕವಾಗಿ ನಾಟಕಗಳ ಒಲವು ತನ್ನತನವಾಗಿ ಉಳಿದಿದೆ- ಸುನೀಲ್ ಗೌಡ.

Date:

ಆಧುನಿಕತೆಯ ಅಬ್ಬರದಲ್ಲಿ ಟಿವಿ ಮತ್ತು ಮೊಬೈಲ್ ಮಾಧ್ಯಮಗಳು ಮನುಷ್ಯನನ್ನು ಆವರಿಸಿಕೊಂಡಿದ್ದರೂ, ಗ್ರಾಮೀಣ ಭಾಗದ ಸಂಸ್ಕೃತಿಯಲ್ಲಿ ಸಾಮಾಜಿಕ ನಾಟಕಗಳು ಇಂದಿಗೂ ತನ್ನ ತನ ಉಳಿಸಿಕೊಂಡಿವೆ ಎಂದು ತಾಪಂ ಮಾಜಿ ಸದಸ್ಯ ಸುನೀಲ್ ಗೌಡ ಹೇಳಿದರು.

ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿಯ ಹಿರೇಕಲಗೋಡು ಗ್ರಾಮದಲ್ಲಿ ಈಶ್ವರ ಬಸವೇಶ್ವರ ದೇವರ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಬಸವೇಶ್ವರ ಗೆಳೆಯರ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಅಣ್ಣನ ಅರಮನೆ ಅರ್ಥಾತ್ ಕರ್ನಾಟಕದ ಹುಲಿ ಎಂಬ ಸಾಮಾಜಿಕ ನಾಟಕದ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಳ್ಳಿಗಳಲ್ಲಿ ಜಾತಿ-ಧರ್ಮದ ಹಂಗಿಲ್ಲದೆ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಹಬ್ಬಗಳನ್ನು ಆಚರಿಸುವುದು ಶ್ಲಾಘನೀಯ. ನಾಟಕ, ಕ್ರೀಡೆ ಅಂತಹ ಕಾರ್ಯಕ್ರಮಗಳು ಗ್ರಾಮದ ಸಂಘಟನೆಗೆ ಪೂರಕವಾಗಿವೆ, ನಮ್ಮ ಮಣ್ಣಿನ ಪ್ರತಿಭೆಗಳಿಗೆ ವೇದಿಕೆ ನೀಡಿ ಪ್ರೋತ್ಸಾಹಿಸುವುದು ಅಗತ್ಯವಿದ್ದು‌. ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಗ್ರಾಮದ ಸಮಸ್ಯೆಗಳನ್ನು ಅರಿಯಲು ನೆರವಾಗುತ್ತವೆ ಎಂದರು.

ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಎಸ್ ಮಧು ಬಂಗಾರಪ್ಪ ಅವರ ಪ್ರಯತ್ನದಿಂದ ಗುಡ್ನಾಪುರದಿಂದ ಹಿರೇಕಲಗೋಡು ಗ್ರಾಮದವರೆಗಿನ ರಸ್ತೆ ಕಾಮಗಾರಿಗೆ 1 ಕೋಟಿ ರೂ‌. ಅನುದಾನ ಬಿಡುಗಡೆಯಾಗಿದ್ದು. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ, ಶೀಘ್ರವೇ ಕಾಮಗಾರಿ ಆರಂಭಗೊಳ್ಳಲಿದೆ. ಗ್ರಾಮದಲ್ಲಿ ಸಮುದಾಯ ಭವನ ಹಾಗೂ ಗ್ರಾಮದ ಸಮಗ್ರ ಅಭಿವೃದ್ಧಿಯನ್ನು ಸಚಿವ ಎಸ್.ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...