Friday, July 24, 2026
Friday, July 24, 2026

Karnataka Nomadic and Semi-Nomadic Community Development Corporation ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಅಭಿವೃದ್ಧಿ ನಿಗಮದಿಂದ ಯೋಜನೆ ಸೌಲಭ್ಯ ಮಾಹಿತಿ

Date:

Karnataka Nomadic and Semi-Nomadic Community Development Corporation ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂದು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯು ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಬುಂಡ್ ಬೆಸ್ತರ್, ಬೈಲ ಪತ್ತರ್, ಭೈರಾಗಿ (ಬಾವ), ಬಜಿನಿಯ, ಬಾಲಸಂತೋಶಿ-ಜೋಶಿ, ಬಾಜಿಗರ್, ಭರಡಿ, ಬುಡ್ ಬುಡಕಿ – ಜೋಶಿ- ಗೋಂಧಳಿ, ಚಾರ, ಚಿತ್ರಕಶಿ-ಜೋಶಿ, ದರ್ವೇಶ್, ದವೇರಿ, ಧೋಲಿ, ದೊಂಬರಿ, ದೊಂಬಿದಾಸ, ದುರ್ಗ-ಮುರ್ಗ (ಬುರ್ ಬುರಚ), ಗರಡಿ, ಘಿಸಡಿ, ಗೊಲ್ಲ, ಗೋಂಧಳಿ, ಗೋಪಲ್, ಹೆಳವ, ಹಾವ್ ಗಾರ (ಹಾವಡಿಗರ್), ಜೋಗಿ, ಜೋಶಿಸಾದ ಜೋಶಿ, ಕಾಶಿಕಪಾಡಿ, ಕಡಬು, ಕೆಲ್ ನಾರಿ, ಕಿಳ್ಳೆಕ್ಯಾತನ್, ಕೊಲಾತಿ, ಮಸನಿಯ ಯೋಗಿ, ನಂದಿವಾಲ ಜೋಶಿ, ಘೋಂಡಲ್ ಪುಲ್ ಮಲ್ಲಿ, ನಾಥವಂಧಿ ಡೌರಿ ಗೋಸಾವಿ, ನೀರ್ಶಿಕಾರಿ, ಪಂಗಲ್, ಪಿಚಗುಂಡಲು, ಸನ್ ಸಿಯ, ಸರಾನಿಯ, ಸರೋಡಿ, ಶಿಕ್ಕಲಿಗಾರ್, ತಿರುಮಲಿ, ಪಡಿ, ವಗ್ರಿ, ವ್ಯಡು, ವಾಸುದೇವ್, ವಿರ್ ಪ್ರವರ್ಗ-1 ಈ ಎಲ್ಲಾ ಜಾತಿಗೆ ಸೇರಿದವರಾಗಿರಬೇಕು.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು.ಕುಟುಂಬದ ವಾರ್ಷಿಕ ವರಮಾನ ರೂ.3.00 ಲಕ್ಷಗಳ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿರಬೇಕು.

ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ.

ಆಸಕ್ತರು ಸೇವಾಸಿಂದು ಪೋರ್ಟೆಲ್ http://sevasindhukarnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://kaadc.karnataka.gov.in/kn/ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ,ದೂ. ಸಂ:08182-229634ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...