Friday, July 24, 2026
Friday, July 24, 2026

DVS College of Arts, Science and Commerce ಅಧ್ಯಾಪಕರೇ ಸ್ವತಃ ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವುದು ಅವಶ್ಯಕವಾಗಿದೆ- ಪ್ರೊ.ರಾಜೇಂದ್ರ ಚೆನ್ನಿ

Date:

DVS College of Arts, Science and Commerce ಅಧ್ಯಾಪಕರು ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡುವಾಗ ಸ್ವತಃ ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದು ಕುವೆಂಪು ವಿವಿ ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ವಿದ್ಯಾರ್ಥಿ ಕಲಿಕೆಯ ಮೌಲ್ಯ ನಿರ್ಣಯ ಮತ್ತು ಮೌಲ್ಯಮಾಪನ ತಂತ್ರಗಳು ವಿಷಯ ಕುರಿತು ಮಾತನಾಡಿದರು.

ವಿದ್ಯಾರ್ಥಿಗಳ ಕಲಿಕೆಯು ಒಂದೇ ರೀತಿಯಲ್ಲಿ ಇರದೆ ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕೆಯ ಮಟ್ಟವು ವಿಭಿನ್ನವಾಗಿ ಇರುತ್ತದೆ. ಆ ವಿಭಿನ್ನತೆಯನ್ನು ಅರ್ಥ ಮಾಡಿಕೊಂಡು ಅದಕ್ಕೆ ತಕ್ಕಂತೆ ಅಧ್ಯಾಪಕರು ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಬೇಕಾಗುತ್ತದೆ. ಇಂದಿನ ಆಧುನಿಕ ಯುಗದಲ್ಲಿ ಈ ಮೌಲ್ಯಮಾಪನ ಎಂಬುದು ಸಾಂಪ್ರದಾಯಿಕತೆಗಿಂತ ಭಿನ್ನವಾಗಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಅಗತ್ಯಗಳು ಮತ್ತು ಅವಶ್ಯಕತೆಗಳಿಗೆ ಅನುಗುಣವಾಗಿ ಬೋಧನೆ ಮಾಡಬೇಕಾಗುತ್ತದೆ ಎಂದು ಸಲಹೆ ನೀಡಿದರು.

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಎಚ್.ಕೇಶವ ಮಾತನಾಡಿ, ಪ್ರತಿಯೊಬ್ಬ ಅಧ್ಯಾಪಕನು ಸರಿಯಾಗಿ ತಯಾರಿ ನಡೆಸಿಕೊಂಡು ಅಧ್ಯಾಪನ ಮಾಡಿದಾಗ ಮಾತ್ರ ವಿದ್ಯಾರ್ಥಿಗಳಿಗೆ ಸಂಪೂರ್ಣ ಜ್ಞಾನ ವರ್ಗಾವಣೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.

ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡುವ ರೀತಿಯಲ್ಲಿ ಅಧ್ಯಾಪಕರು ಹೆಚ್ಚು ಹೆಚ್ಚು ಜ್ಞಾನವನ್ನು ಪಡೆದುಕೊಂಡು ಪಾಠ ಪ್ರವಚನಗಳನ್ನು ನೆರವೇರಿಸಬೇಕು. ಇಂದು ಮೊದಲು ಮೌಲ್ಯಮಾಪನ ಆಗಬೇಕಾಗಿರುವುದು ವಿದ್ಯಾರ್ಥಿಗಳದ್ದಲ್ಲ, ಅಧ್ಯಾಪಕರದ್ದು ಎಂದು ತಿಳಿಸಿದರು.

DVS College of Arts, Science and Commerce ವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಜಿ.ಮಧು, ಬೆಂಗಳೂರಿನ ಕ್ರೈಸ್ಟ್‌ ವಿವಿ ಸಹಾಯಕ ಪ್ರಾಧ್ಯಾಪಕ ಡಾ. ಪ್ರಮೋದ್ ಕುಮಾರ್, ಕಾರ್ಯಕ್ರಮ ಸಂಯೋಜಕ ಡಾ. ನವೀನ್.ವಿ, ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಸಹಾಯಕ ಪ್ರಾಧ್ಯಾಪಕಿ ಪಿ.ಅರ್ಪಿತಾ, ಡಯಾನ ಎ ಡಿಬೆರ್ಟಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...