Wednesday, September 9, 2026
Wednesday, September 9, 2026

Shivaganga Yoga Center ಹಿಂದೂಗಳ ಪವಿತ್ರ ಹಬ್ಬ, ಶಿವರಾತ್ರಿ- ಎಸ್.ರುದ್ರೇಗೌಡ

Date:

Shivaganga Yoga Center ಹಿಂದುಗಳ ಬಹಳ ವಿಶೇಷವಾದ ಪವಿತ್ರ ಹಬ್ಬ ಮಹಾಶಿವರಾತ್ರಿ. ಈ ಪವಿತ್ರ ದಿನ ಮಾಡುವ ಎಲ್ಲಾ ಕೆಲಸಗಳು ಶಿವನಿಗೆ ಸಮರ್ಪಣೆ ಆಗುತ್ತವೆ ಎಂದು ಮಾಜಿ ಎಂಎಲ್‌ಸಿ, ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷ ಎಸ್.ರುದ್ರೇಗೌಡ ಹೇಳಿದರು.

ಕಲ್ಲಳ್ಳಿಯಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರದ “ಸಂಪೂರ್ಣ ಯೋಗ ಆರೋಗ್ಯ ಧಾಮ ” ಆವರಣದಲ್ಲಿ ಇರುವ ಧ್ಯಾನಸಕ್ತ ಆದಿ ಯೋಗಿ ಶಿವನ ಮೂರ್ತಿಗೆ ಅರ್ಚನೆ, ಕ್ಷೀರಾಭಿಷೇಕ, ಬಿಲ್ವಾರ್ಚನೆ ಹಾಗೂ ವಿಶೇಷ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶಾದ್ಯಂತ ಸಡಗರ ಸಂಭ್ರಮದಿಂದ ಮಹಾಶಿವರಾತ್ರಿಯನ್ನು ಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ. ಯೋಗ, ಪ್ರಾಣಾಯಾಮ, ಧ್ಯಾನದ ಜೊತೆಗೆ ಶಿವನ ಪೂಜೆಯು ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ನೀಡುತ್ತದೆ. ಇಂತಹ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ನಮ್ಮಲ್ಲಿ ಜೀವನೋತ್ಸಾಹ ಹೆಚ್ಚಿಸುತ್ತವೆ ಎಂದು ತಿಳಿಸಿದರು.

ಟ್ರಸ್ಟಿ, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಅವರು ಯೋಗ ಕೇಂದ್ರದ ಎಲ್ಲಾ ಶಿಬಿರಾರ್ಥಿಗಳಿಗೆ ಹಾಗೂ ಯೋಗಪಟುಗಳಿಗೆ ಶಿವರಾತ್ರಿ ಹಬ್ಬದ ಶುಭಾಶಯಗಳು ತಿಳಿಸಿ ಶಿವಪೂಜೆಯಲ್ಲಿ ದಂಪತಿ ಸಮೇತ ಪಾಲ್ಗೊಂಡಿದ್ದರು. ಪ್ರೊ. ಎ.ಎಸ್.ಚಂದ್ರಶೇಖರ್ ಹಾಗೂ ಭಾರತಿ ಚಂದ್ರಶೇಖರ್ ಶಿವಪೂಜೆಯಲ್ಲಿ ಪಾಲ್ಗೊಂಡಿದ್ದರು.

ಶಿವನಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಹೂವಿನ ಅಲಂಕಾರಗಳನ್ನ ಮಾಡಿ ಭಕ್ತಿಯಿಂದ ಪೂಜಿಸಲಾಯಿತು. ನಂತರ ಎಲ್ಲರಿಗೂ ಪ್ರಸಾದ ವಿನಿಯೋಗ ಮಾಡಲಾಯಿತು.

ಯೋಗ ಶಿಕ್ಷಣಾರ್ಥಿಗಳೇ ತಯಾರಿಸಿದ ಸುಂದರವಾದ ಎಕ್ಕದ ಹೂವಿನ ಮಾಲೆ ಬಹುಆಕರ್ಷಿತವಾಗಿತ್ತು. ಅಭಿಷೇಕಗೊಂಡು ಭಸ್ಮ, ಗಂಧ, ಅರಿಶಿಣ, ಕುಂಕುಮ, ಬಿಲ್ವಪತ್ರೆ ಪುಷ್ಪಗಳಿಂದ ಅಲಂಕೃತವಾಗಿದ್ದ ಧ್ಯಾನಸ್ಥ ಶಿವನ ಮೂರ್ತಿ ದರ್ಶನ ಆಕರ್ಷಕವಾಗಿತ್ತು. ಬ್ರಾಹ್ಮಿ ಕಾಲದಲ್ಲೇ ಯೋಗ ಶಿಕ್ಷಣಾರ್ಥಿಗಳಿಂದ ಸಾಮೂಹಿಕ ಭಜನೆ ಭಕ್ತಿಗೀತೆಗಳಿಂದ ಮಹಾಶಿವರಾತ್ರಿಯಂದು ಭಕ್ತಿ ಸಮರ್ಪಣೆ ಆರಂಭವಾಗಿತ್ತು.

Shivaganga Yoga Center ಕಾರ್ಯಕ್ರಮದಲ್ಲಿ ಮಂತ್ರ ಸಹಿತ ಸಹಸ್ರ ಬಿಲ್ವಾರ್ಚನೆಯನ್ನು ನೆರೆದಿದ್ದಂತಹ ಭಕ್ತವೃಂದ, ಯೋಗ ಶಿಕ್ಷಣಾರ್ಥಿಗಳು, ವಿಶ್ವಸ್ಥ ಮಂಡಳಿ ಮತ್ತು ಪೋಷಕ ಸಮಿತಿ ಸದಸ್ಯರು ಮತ್ತು ಆಗಮಿಸಿದ ಎಲ್ಲಾ ಸಾರ್ವಜನಿಕರು ವೈಯಕ್ತಿಕವಾಗಿ ಆದಿ ಯೋಗಿ ಶಿವನ ಮೂರ್ತಿಗೆ ಪುಷ್ಪ ಬಿಲ್ವಾರ್ಚನೆಯೊಂದಿಗೆ ಭಕ್ತಿ ಸಮರ್ಪಿಸಿಲು ಅವಕಾಶ ನೀಡಲಾಯಿತು.

ಯೋಗಾಚಾರ್ಯ ಡಾ. ಸಿ.ವಿ. ರುದ್ರರಾಧ್ಯ, ಯೋಗ ಕೇಂದ್ರದ ಕಾರ್ಯದರ್ಶಿ ಎಚ್.ಎಮ್. ಚಂದ್ರಶೇಖರಯ್ಯ, ಯೋಗ ಶಿಕ್ಷಕರಾದ ಕಾಟನ್ ಜಗದೀಶ್, ನೀಲಕಂಠ ರಾವ್, ಜಿಎಸ್ ಓಂಕಾರ್ ಮೂರ್ತಿ, ಪರಿಸರ ನಾಗರಾಜ್. ರೋಟರಿ ಜಿ.ವಿಜಯಕುಮಾರ್. ವಿಜಯ ಬಾಯರ್, ನಾಗರತ್ನಮ್ಮ ಹಾಗೂ ಯೋಗಪಟುಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...