S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ, ವೈಯಕ್ತಿಕ ಜೀವನದಲ್ಲಿ ಸಕರಾತ್ಮಕ ಪರಿವರ್ತನೆ ಗುಣವನ್ನು ಬೆಳೆಸುವ ಒಂದು ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವಾ ಸಂಸ್ಥೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾಶಿ ವಿಶ್ವನಾಥ ದರ್ಶನ ಸ್ವರ್ಣೀಮ ಭಾರತ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಂತರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣ ಮತ್ತು ಸಮುದಾಯ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಶಾಂತಿ, ಏಕತೆ ಮತ್ತು ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ ಎಂದು ತಿಳಿಸಿದರು.
ಶಿವಮೊಗ್ಗ ನಗರದ ಬ್ರಹ್ಮಕುಮಾರಿ ಈಶ್ವರೀ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮಕುಮಾರಿ ಸ್ವಾತಿ ಮಾತನಾಡಿ, ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ 1937ರಲ್ಲಿ ಸ್ಥಾಪನೆಯಾಗಿ ವಿಶ್ವಾದ್ಯಂತ ಆಧ್ಯಾತ್ಮಿಕ ಮತ್ತು ರಾಜಯೋಗ ಧ್ಯಾನದ ಮೇಲೆ ಕೇಂದ್ರೀಕರಿಸಿದೆ. ಪ್ರಮುಖವಾಗಿ ಮಹಿಳೆಯರೇ ನೇತೃತ್ವ ವಹಿಸುತ್ತಿರುವ ಇದು, 150 ದೇಶಗಳಲ್ಲಿ 10,000ಕ್ಕೂ ಹೆಚ್ಚಿನ ಕೇಂದ್ರಗಳನ್ನು ಹೊಂದಿದೆ ಎಂದರು.
ಶಿವಮೊಗ್ಗದ ಎಲ್ಲ ಶಿವಭಕ್ತರಿಗೆ ಮುಂದಿನ ದಿನಗಳಲ್ಲಿ ಶಿವರಾತ್ರಿ ಹಬ್ಬದಲ್ಲಿ ಜ್ಯೋತಿರ್ಲಿಂಗಗಳ ಮಾದರಿ ಸ್ಥಾಪಿಸಿ ಅವುಗಳ ದರ್ಶನ ಮಾಡಿಸುವ ಯೋಜನೆ ಇದೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಹಬ್ಬಗಳು ನಮ್ಮಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಮೂಡಿಸುವುದರ ಜೊತೆಗೆ ದೇಶಭಕ್ತಿಯನ್ನು ಹಾಗೂ ಸಂಸ್ಕೃತಿಯ ಪರಂಪರೆಯನ್ನು ಬಲಪಡಿಸುತ್ತವೆ ಎಂದು ತಿಳಿಸಿದರು.
ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಸಂಸ್ಥೆಯು ಶಾಂತಿಯ “ಜಾಗತಿಕ ಸಂಸ್ಕೃತಿ”ಯನ್ನು ಬೆಳೆಸುತ್ತದೆ. ಜಾತಿ, ಮತ, ಧರ್ಮದ ಭೇದ ಇಲ್ಲದೆ ಸರ್ವ ಧರ್ಮದ ಪ್ರತೀಕವಾಗಿದೆ ಎಂದರು.
S.N. Channabasappa ಅಂಚೆ ಅಧೀಕ್ಷಕ ಎಂ.ಕುಮಾರಸ್ವಾಮಿ ಮಾತನಾಡಿ, ಸಂಸ್ಥೆಯು ಸೇವಾನಿರತ ಅಂಚೆ ಇಲಾಖೆಯ ಪೋಸ್ಟ್ ಮ್ಯಾನ್ ಮತ್ತು ಎನ್ ಟಿ ಎಸ್ ನೌಕರರನ್ನು ಗುರುತಿಸಿ ಸನ್ಮಾನಿಸಿರುವುದು ಮಾದರಿಯಾಗಿದೆ ಎಂದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ವೈದ್ಯ ಡಾ. ಪ್ರಸನ್ನ ಬಸವರಾಜಪ್ಪ, ಡಾ. ಆಕಾಶ್ ಹೊಸ್ತೋಟ, ವಾಹನ ನಿರೀಕ್ಷಕ ಪಿ.ಎಂ.ಮಲ್ಲೇಶಪ್ಪ, ಉಪ ತಹಸೀಲ್ದಾರ್, ಗಿರಿರಾಜ್ ಎಸ್.ಒ, ಶ್ರೀ ಸರಸ್ವತಿ ಸಂಗೀತ ವಿಶ್ವವಿದ್ಯಾಲಯ ಬಿ.ಕೆ.ವಿಜಯಲಕ್ಷ್ಮೀ ರಾಘು, ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ ನಿರ್ದೇಶಕ ಪಿ.ರುದ್ರೇಶ್, ಲೆಕ್ಕಪರಿಶೋಧಕ ಆರ್.ಮನೋಹರ, ತೋಟಗಾರಿಕಾ ಮಹಾವಿದ್ಯಾಲಯ ಡೀನ್ ಡಾ. ಡಿ.ತಿಪ್ಪೇಶ್ ಇತರರಿದ್ದರು.
