Thursday, June 4, 2026
Thursday, June 4, 2026

S.N. Channabasappa ಶಿವಮೊಗ್ಗ ನಗರದ ಒಂದನೇ ವಾರ್ಡಿನ ಜನಸಮಸ್ಯೆ ಬಗ್ಗೆ ಶಾಸಕರಿಂದ ಪರಿಶೀಲನೆ. ಅಧಿಕಾರಿಗಳಿಗೆ ಸೂಚನೆ

Date:

S.N. Channabasappa ಶಿವಮೊಗ್ಗ ನಗರದ 1ನೇ ವಾರ್ಡ್ ವ್ಯಾಪ್ತಿಯ ಆದರ್ಶ ಕಾಲೋನಿಯ ನಿವಾಸಿಗಳು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂದು ಬೆಳಿಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡದೊಂದಿಗೆ ಬಡಾವಣೆಯ ನಿವಾಸಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಬಡಾವಣೆಯಲ್ಲಿ ವಿದ್ಯುತ್ ಏರುಪೇರಿನಿಂದಾಗಿ ಗೃಹೋಪಯೋಗಿ ವಸ್ತುಗಳು ಹಾನಿಯಾಗುತ್ತಿರುವುದು ಬಗ್ಗೆ ಮಾಹಿತಿ ಪಡೆದು ಇಂತಹ ತಾಂತ್ರಿಕ ದೋಷಗಳನ್ನು ಅಧಿಕಾರಿಗಳು ತಕ್ಷಣವೇ ಸರಿಪಡಿಸುವಂತೆ ಸೂಚಿಸಿದರು.

ಜೊತೆಗೆ, ಬಡಾವಣೆಯ ಪಾರ್ಕ್ ಅಭಿವೃದ್ಧಿಪಡಿಸುವುದು, ಕುಡಿಯುವ ನೀರಿನ ಸಮರ್ಪಕ ಪೂರೈಕೆ, ಬೀದಿ ದೀಪಗಳ ದುರಸ್ತಿ ಹಾಗೂ ಪ್ರಮುಖ ರಸ್ತೆಗಳಿಗೆ ನಾಮಫಲಕಗಳನ್ನು ಅಳವಡಿಸುವ ಕಾರ್ಯಗಳನ್ನು ಕೂಡಲೇ ಆರಂಭಿಸಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

S.N. Channabasappa ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tunga Reservoir ಅವಿರತ ಮಳೆ.ತುಂಗಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಸಾಧ್ಯತೆ. ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಮಾಹಿತಿ.

Tunga Reservoir ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ...

Shivamogga Railway Station ಚಲಿಸುತ್ತಿದ್ದ ರೈಲುಬೋಗಿ ಹತ್ತುವ ಪ್ರಯತ್ನದಲ್ಲಿ ಆಯತಪ್ಪಿ ಬೀಳಲು ಬಿಡದೇ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ.

Shivamogga Railway Station ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು...

H.S. Sundaresh ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು- ಹೆಚ್.ಎಸ್.ಸುಂದರೇಶ್.

H.S. Sundaresh ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಮಾಡುವುದರಿಂದ...