Wednesday, September 9, 2026
Wednesday, September 9, 2026

Agnipath scheme ಅಗ್ನಿವೀರ್ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನ

Date:

Agnipath scheme ಅಗ್ನಿಪಥ್ ಯೋಜನೆಯಡಿ 2027ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಶಿವಮೊಗ್ಗ, ದಾವಣಗೆರೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಉಡುಪಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತರು ಆನ್‌ಲೈನ್ ನೋಂದಣಿ ಪೊರ್ಟಲ್-WWW.JOININDINARMY.NIC.IN ರ ಮೂಲಕ ಏ. 01 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Agnipath scheme ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂ. ಸಂ.: 0824-2458376, 7411497644 ಅಥವಾ WWW.JOININDINARMY.NIC.IN ಎಂಬ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ. ಭಾರತೀಯ ಸೇನೆಯಲ್ಲಿ ಆಯ್ಕೆ ವಿಧಾನವು ನ್ಯಾಯಯುತ ಮತ್ತು ಪಾರದರ್ಶಕವಾಗಿದ್ದು, ಅರ್ಹತೆ ಮತ್ತು ದೈಹಿಕ ಕ್ಷಮತೆ ಮೇರೆಗೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿನ ಆಯ್ಕೆ ಪ್ರಕ್ರಿಯೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್‌ಗಳಂತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಅವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...