Friday, July 24, 2026
Friday, July 24, 2026

ನೃತ್ಯ ಮತ್ತು ಚಲನೆಯ ಚಿಕಿತ್ಸಾ ಶಿಬಿರಗಳು ಮಕ್ಕಳಿಗೆ ಉಪಯುಕ್ತ- ನ್ಯಾ. ದೀಪಾ

Date:

ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಬಾಲನ್ಯಾಯ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಫೆ. 13 ರಂದು ಸರ್ಕಾರಿ ಬಾಲಕಿಯರ ಬಾಲಮಂದಿರದ ಮಕ್ಕಳಿಂದ ನೃತ್ಯ ಮತ್ತು ಚಲನೆಯ ಚಿಕಿತ್ಸಾ ಪ್ರಾತ್ಯಕ್ಷಿಕೆ ಯಶಸ್ವಿಯಾಗಿ ನಡೆಯಿತು.

ಡಾ.ಕೆ.ಎಸ್.ಪವಿತ್ರಾರ ನಿರ್ದೇಶನದಲ್ಲಿ ನಡೆದ ಈ ಶಿಬಿರದಲ್ಲಿ 3 ತಿಂಗಳುಗಳ ಕಾಲ ಕಲಿತ ನೃತ್ಯ ಚಲನೆಯ ವಿವಿಧ ಅಂಶಗಳನ್ನು ಮಕ್ಕಳು ಪ್ರದರ್ಶಿಸಿದರು.

ಬಾಲನ್ಯಾಯ ಮಂಡಳಿಯ ಅಧ್ಯಕ್ಷರು ಮತ್ತು ಹಿರಿಯ ನ್ಯಾಯಾಧೀಶರಾದ ಶ್ರೀಮತಿ ದೀಪಾ ರವರು ಕಾರ್ಯಕ್ರಮ ಉದ್ಘಾಟಿಸಿ ಇಂತಹ ಶಿಬಿರಗಳು ಅಪೇಕ್ಷಣೀಯ. ಮಕ್ಕಳ ಸಾಮರ್ಥ್ಯವನ್ನು ಹತ್ತು ಹಲವು ರೀತಿಗಳಲ್ಲಿ ಬೆಳೆಸುತ್ತವೆ ಎಂದು ಅಭಿಪ್ರಾಯ ಪಟ್ಟರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ ಇಂತಹ ಪ್ರಯತ್ನಗಳನ್ನು ಎಲ್ಲಾ ಬಾಲಮಂದಿರಗಳಿಗೂ ವಿಸ್ತರಿಸಬೇಕಾದ ಅವಶ್ಯಕತೆಯ ಬಗ್ಗೆ ಗಮನಸೆಳೆದರು.
ಶಿಬಿರದ ನಿರ್ದೇಶಕಿ ಮತ್ತು ಬಾಲ ನ್ಯಾಯ ಮಂಡಳಿಯ ಸದಸ್ಯೆ ಡಾ.ಕೆ.ಎಸ್.ಪವಿತ್ರ. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ತಾಜುದ್ದೀನ್ ಖಾನ್, ಡಾ.ಪ್ರೀತಿ ಪೈ. ಡಾ.ಅರ್ಚನಾ ಭಟ್, ಶ್ರೀಮತಿ ಜ್ಯೋತಿಕಲಾ ಮತ್ತು ಬಾಲ ನ್ಯಾಯ ಮಂಡಳಿಯ ಸಿಬ್ಬಂದಿ ಭಾಗವಹಿಸಿ ಮಕ್ಕಳನ್ನು ಶ್ಲಾಘಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...