ಪಾಥ್ವೇಸ್ ಘಟಕದ ವತಿಯಿಂದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ರಸಪ್ರಶ್ನಾ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು.
Kuvempu University ಪ್ರೊ. ತಿಮ್ಮರಾಯಪ್ಪ, ಕುಲಸಚಿವರು (ಮೌಲ್ಯಮಾಪನ), ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ, ಇವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಜೊತೆಗೆ ಇತರೆ ಶೈಕ್ಷಣಿಕ ಚಟುವಟಿಕೆಗಳ ಮಹತ್ವವನ್ನು ವಿವರಿಸಿದರು ಮತ್ತು ಈ ರೀತಿಯ ರಸಪ್ರಶ್ನೆ ಸ್ಪರ್ಧೆಗಳು ವಿದ್ಯಾರ್ಥಿಗಳ ಭೌದ್ಧಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಶ್ರೀ. ಹೇಮಂತ್ ಎನ್. ಐಎಎಸ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾಪಂಚಾಯತ್, ಶಿವಮೊಗ್ಗ, ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜೀವನದಲ್ಲಿ ಮಹತ್ತರವಾದ ಕನಸನ್ನು ಕಾಣಬೇಕು ಹಾಗೂ ಆ ಕನಸುಗಳನ್ನು ನನಸಾಗಿಸಾಲು ಪ್ರತಿನಿತ್ಯ ಶ್ರಮವಹಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ತಮ್ಮ ವಿಧ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಗಾಗಿ ತಮ್ಮನ್ನು ತಾವು ತೊಡಗಿಸಿಕೊಕೊಳ್ಳಬೇಕೆಂದು ನೆರೆದಿರುವ ವಿಧ್ಯಾರ್ಥಿಗಳಿಗೆ ತಿಳಿಹೇಳಿದರು.
ಶ್ರೀ ಜಿ. ವಿಜಯ್ ಕುಮಾರ್, ಉಪಾಧ್ಯಕ್ಷರು, ಶಿವಮೊಗ್ಗ ಜಿಲ್ಲಾ
ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ
ಇವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಆಳವಾದ ಅಧ್ಯಯನ ಕಡಿಮೆಯಾಗುತ್ತಿದೆ, ಅದರಲ್ಲಿಯೂ ಇತಿಹಾಸ, ವಿಜ್ಞಾನ ಮತ್ತು ತಂತ್ರಜ್ಞಾನಗಳ ವಿಷಯಗಳ ಕುರಿತು ಅಭ್ಯಸ ಮಾಡದೇ ಯು.ಪಿ.ಎಸ್.ಸಿ , ಕೆ.ಪಿ.ಎಸ್.ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕಷ್ಟ ಸಾಧ್ಯ ಎಂದರು ಮತ್ತು ವಿದ್ಯಾರ್ಥಿಗಳು ಒಂದೇ ಗುರಿಯನ್ನು ಇಟ್ಟು ಹಾಗೂ ಆ ಗುರಿಯನ್ನು ಮುಟ್ಟುವ ತನಕ ವಿಶ್ರಮಿಸಬಾರದು ಎಂಬ ಕಿವಿ ಮಾತುಗಳನ್ನು ಆಡಿದರು.
Kuvempu University ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಜೇಶ್ವರಿ ಎನ್, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸಿರಾಜ್ ಅಹಮ್ಮದ್, ಪಾಥ್ವೇಸ್ ನಿರ್ದೇಶಕರಾದ ಡಾ.ಗಿರಿಧರ್ ಕೆ.ವಿ, ಎಜುರೇಟ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್ ಶಂಕರ್ ನಾರಾಯಣ್ ಮತ್ತು ವಿವಿಧ ಕಾಲೇಜಿನ ವಿದ್ಯಾರ್ಥಿಗಳ 34 ತಂಡಗಳು ಹಾಗೂ ಪಾಥ್ವೇಸ್ ಘಟಕದ ಸ್ವಯಂಸೇವಕರೆಲ್ಲರು ಉಪಸ್ಥಿತರಿದ್ದರು.
