Wednesday, September 9, 2026
Wednesday, September 9, 2026

Shivamogga District Minority Welfare Department ಅಬ್ದುಲ್ ಕಲಾಂ / ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿಗೆ ಪ್ರವೇಶಾತಿಗೆ ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ

Date:

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿಗಾಗಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಹಿಂದೂಳಿದ ವರ್ಗದ ಸಮುದಾಯದ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು.

ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, 11 ರಿಂದ 13 ವರ್ಷದ ವಯೋಮಾನದವರಾಗಿರಬೇಕು.
ಅರ್ಹ ವಿದ್ಯಾರ್ಥಿಗಳು ಸೇವಾಸಿಂದು ಪೋರ್ಟಲ್ https://sevasindhuservices.karnataka.gov.in ರಲ್ಲಿ ಫೆ.28 ರೊಳಗಾಗಿ ಸಲ್ಲಿಸುವುದು.

ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Shivamogga District Minority Welfare Department ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್ 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ದೂ.ಸಂ.: 08182-220206, ಶಿವಮೊಗ್ಗ ಮೇಲಿನಹನಸವಾಡಿ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು -9483623537, ಭದ್ರಾವತಿಯ ದೊಡ್ಡೆರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-9591237905, ಶಿರಾಳಕೊಪ್ಪ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-8310350361, ಶಿಕಾರಿಪುರ ಉಡುಗಣಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು -9036866642, ಸಾಗರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಳರು-9740800706, ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ ಶಿವಮೊಗ್ಗ-7676888388, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029, ಸಾಗರ-7338222907 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...