Saturday, February 21, 2026
Saturday, February 21, 2026

Manasadhara Trust ರಾಷ್ಟ್ರೀಯ ಹಾಕಿ ಚಾಂಪಿಯನ್ ಶಿಪ್ ಶಿಬಿರಕ್ಕೆ ಶಿವಮೊಗ್ಗದ ಕು.ಎಂ.ಮನ್ಮಥಾ ಮತ್ತು ಕು.ಹೆಚ್.ಬಿ.ಕೀರ್ತನಾ ಆಯ್ಕೆ

Date:

Manasadhara Trust ಮಾನಸಾಧಾರ ಟ್ರಸ್ಟ್ (ರಿ) ನ ಮನಃಸ್ಫೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿಯರಾದ ಕು.ಮನ್ಯಥಾ.ಎಂ ಮತ್ತು ಕು.ಕೀರ್ತನಾ.ಹೆಚ್.ಬಿ ಯವರು ಇದೆ ಫೆಬ್ರವರಿ 22 ರಿಂದ 27 ರವರೆಗೆ ಹರಿಯಾಣದ ರೋಹ್ತಕ್‌ನಲ್ಲಿ ನಡೆಯಲಿರುವ ಸ್ಪೆಷಲ್ ಒಲಂಪಿಕ್ ಭಾರತ್ ನ ರಾಷ್ಟ್ರ ಮಟ್ಟದ ಹಾಕಿ ಚಾಂಪಿಯನ್‌ ಶಿಪ್ ಕ್ಯಾಂಪಿಗೆ ಆಯ್ಕೆಯಾಗಿದ್ದು ಜೊತೆಗೆ ಮನಃಸ್ಫೂರ್ತಿ ವಿಶೇಷ ಶಾಲೆಯ ಪ್ರಾಂಶುಪಾಲರಾದ ಶ್ರೀ ಮತಿ ಜ್ಯೋತಿ ಅರುಣ್ ಕುಮಾರ್ ರವರು ಕ್ರೀಡಾಪಟುಗಳಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಕೋಚ್ ಆಗಿ ಆಯ್ಕೆಯಾಗಿದ್ದಾರೆ.

Manasadhara Trust ಈ ಕುರಿತು ಮಾನಸ ಸಮೂಹ ಸಂಸ್ಥೆಯು ಸಂತೋಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿಯರ ಪರಿಶ್ರಮ, ಸಮರ್ಪಣೆ ಮತ್ತು ದೃಢನಿಶ್ಚಯವೇ ಈ ಸಾಧನೆಗೆ ಕಾರಣವೆಂದು ತಿಳಿಸಿದೆ. ಮನಃಸ್ಫೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿಯರಿಗೆ ರಾಷ್ಟ್ರ ಮಟ್ಟದ ಹಾಕಿ ಚಾಂಪಿಯನ್‌ಶಿಪ್ ಕ್ಯಾಂಪಿನಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ಸಂಸ್ಥೆಗೆ ಹೆಮ್ಮೆಯ ವಿಚಾರವಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿನಿಯರು ಇನ್ನಷ್ಟು ಉತ್ತಮ ಸಾಧನೆ ಮಾಡಿ ಸಂಸ್ಥೆಯ ಗೌರವ ಹೆಚ್ಚಿಸಲಿ ಎಂದು ಶುಭಾಶಯ ಕೋರಲಾಗಿದೆ. ಫೆಬ್ರವರಿ 22 ರಂದು ಹರಿಯಾಣಕ್ಕೆ ಹೋಗುತ್ತಿರುವ ಕು.ಮನ್ಯಥಾ.ಎಂ, ಕು.ಕೀರ್ತನಾ.ಹೆಚ್.ಬಿ ಮತ್ತು ಶ್ರೀಮತಿ ಜ್ಯೋತಿ ಅರುಣ್ ಕುಮಾರ್ ರವರಿಗೆ ಮಾನಸ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ರಜನಿ.ಎ.ಪೈ, ಶೈಕ್ಷಣಿಕ ನಿರ್ದೇಶಕರಾದ ಡಾ.ಪ್ರೀತಿ.ವಿ.ಶಾನ್ ಭಾಗ್, ಸಂಸ್ಥೆಯ ಖ್ಯಾತ ನರರೋಗ ತಜ್ಞರಾದ ಡಾ. ವಾಮನ್ ಶಾನ್ ಭಾಗ್, ಮನಃಸ್ಫೂರ್ತಿ ಕಲಿಕಾ ಕೇಂದ್ರದ ಪ್ರಾಂಶುಪಾಲರಾದ ಶ್ರೀಮತಿ ರಂಗನಾಯಕಿ ಹಾಗೂ ಮನಃಸ್ಫೂರ್ತಿಯ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿ ಜಾತ್ರೆಯ ಹೊತ್ತಿಗೆ ಚಂದ್ರಗುತ್ತಿ ದೇವಾಲಯದ ಸಮಗ್ರ ಮೂಲ ಸೌಕರ್ಯಗಳ ಅಭಿವೃದ್ದಿ – ಮಧು ಬಂಗಾರಪ್ಪ

Madhu Bangarappa ಚಂದ್ರಗುತ್ತಿ ದೇವಾಲಯವನ್ನು ಸಮಗ್ರ ಅಭಿವೃದ್ಧಿ ಮಾಡುವ ಉದ್ದೇಶದಿಂದಾಗಿ ಪ್ರಾಧಿಕಾರ...

S.N.Channabasappa ನಗರದೇವತೆಯ ಜಾತ್ರೆಯನ್ನು ಅಚ್ಚುಕಟ್ಟಾಗಿ ಎಲ್ಲರ ಸಹಕಾರದಿಂದ ಆಚರಿಸೋಣ-ಶಾಸಕ ಎಸ್.ಎನ್‌.ಚನ್ನಬಸಪ್ಪ

​​S.N.Channabasappa ನಮ್ಮ ಶಿವಮೊಗ್ಗ ನಗರದ ಅಧಿದೇವತೆ, ಶ್ರೀ ಕೋಟೆ ಮಾರಿಕಾಂಬಾ ದೇವಿಯ...

Chandragutti Shri Renukamba Devi ಚಂದ್ರಗುತ್ತಿ ದೇವಿ ಜಾತ್ರೆಗೆ ಪಲ್ಲಕ್ಕಿ ಉತ್ಸವದ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ

Chandragutti Shri Renukamba Devi ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸೊರಬ...