Monday, April 20, 2026
Monday, April 20, 2026

Manasadhara Trust ರಾಷ್ಟ್ರೀಯ ಹಾಕಿ ಚಾಂಪಿಯನ್ ಶಿಪ್ ಶಿಬಿರಕ್ಕೆ ಶಿವಮೊಗ್ಗದ ಕು.ಎಂ.ಮನ್ಮಥಾ ಮತ್ತು ಕು.ಹೆಚ್.ಬಿ.ಕೀರ್ತನಾ ಆಯ್ಕೆ

Date:

Manasadhara Trust ಮಾನಸಾಧಾರ ಟ್ರಸ್ಟ್ (ರಿ) ನ ಮನಃಸ್ಫೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿಯರಾದ ಕು.ಮನ್ಯಥಾ.ಎಂ ಮತ್ತು ಕು.ಕೀರ್ತನಾ.ಹೆಚ್.ಬಿ ಯವರು ಇದೆ ಫೆಬ್ರವರಿ 22 ರಿಂದ 27 ರವರೆಗೆ ಹರಿಯಾಣದ ರೋಹ್ತಕ್‌ನಲ್ಲಿ ನಡೆಯಲಿರುವ ಸ್ಪೆಷಲ್ ಒಲಂಪಿಕ್ ಭಾರತ್ ನ ರಾಷ್ಟ್ರ ಮಟ್ಟದ ಹಾಕಿ ಚಾಂಪಿಯನ್‌ ಶಿಪ್ ಕ್ಯಾಂಪಿಗೆ ಆಯ್ಕೆಯಾಗಿದ್ದು ಜೊತೆಗೆ ಮನಃಸ್ಫೂರ್ತಿ ವಿಶೇಷ ಶಾಲೆಯ ಪ್ರಾಂಶುಪಾಲರಾದ ಶ್ರೀ ಮತಿ ಜ್ಯೋತಿ ಅರುಣ್ ಕುಮಾರ್ ರವರು ಕ್ರೀಡಾಪಟುಗಳಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಕೋಚ್ ಆಗಿ ಆಯ್ಕೆಯಾಗಿದ್ದಾರೆ.

Manasadhara Trust ಈ ಕುರಿತು ಮಾನಸ ಸಮೂಹ ಸಂಸ್ಥೆಯು ಸಂತೋಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿಯರ ಪರಿಶ್ರಮ, ಸಮರ್ಪಣೆ ಮತ್ತು ದೃಢನಿಶ್ಚಯವೇ ಈ ಸಾಧನೆಗೆ ಕಾರಣವೆಂದು ತಿಳಿಸಿದೆ. ಮನಃಸ್ಫೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿಯರಿಗೆ ರಾಷ್ಟ್ರ ಮಟ್ಟದ ಹಾಕಿ ಚಾಂಪಿಯನ್‌ಶಿಪ್ ಕ್ಯಾಂಪಿನಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ಸಂಸ್ಥೆಗೆ ಹೆಮ್ಮೆಯ ವಿಚಾರವಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿನಿಯರು ಇನ್ನಷ್ಟು ಉತ್ತಮ ಸಾಧನೆ ಮಾಡಿ ಸಂಸ್ಥೆಯ ಗೌರವ ಹೆಚ್ಚಿಸಲಿ ಎಂದು ಶುಭಾಶಯ ಕೋರಲಾಗಿದೆ. ಫೆಬ್ರವರಿ 22 ರಂದು ಹರಿಯಾಣಕ್ಕೆ ಹೋಗುತ್ತಿರುವ ಕು.ಮನ್ಯಥಾ.ಎಂ, ಕು.ಕೀರ್ತನಾ.ಹೆಚ್.ಬಿ ಮತ್ತು ಶ್ರೀಮತಿ ಜ್ಯೋತಿ ಅರುಣ್ ಕುಮಾರ್ ರವರಿಗೆ ಮಾನಸ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ರಜನಿ.ಎ.ಪೈ, ಶೈಕ್ಷಣಿಕ ನಿರ್ದೇಶಕರಾದ ಡಾ.ಪ್ರೀತಿ.ವಿ.ಶಾನ್ ಭಾಗ್, ಸಂಸ್ಥೆಯ ಖ್ಯಾತ ನರರೋಗ ತಜ್ಞರಾದ ಡಾ. ವಾಮನ್ ಶಾನ್ ಭಾಗ್, ಮನಃಸ್ಫೂರ್ತಿ ಕಲಿಕಾ ಕೇಂದ್ರದ ಪ್ರಾಂಶುಪಾಲರಾದ ಶ್ರೀಮತಿ ರಂಗನಾಯಕಿ ಹಾಗೂ ಮನಃಸ್ಫೂರ್ತಿಯ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...