Wednesday, September 9, 2026
Wednesday, September 9, 2026

Manasadhara Trust ರಾಷ್ಟ್ರೀಯ ಹಾಕಿ ಚಾಂಪಿಯನ್ ಶಿಪ್ ಶಿಬಿರಕ್ಕೆ ಶಿವಮೊಗ್ಗದ ಕು.ಎಂ.ಮನ್ಮಥಾ ಮತ್ತು ಕು.ಹೆಚ್.ಬಿ.ಕೀರ್ತನಾ ಆಯ್ಕೆ

Date:

Manasadhara Trust ಮಾನಸಾಧಾರ ಟ್ರಸ್ಟ್ (ರಿ) ನ ಮನಃಸ್ಫೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿಯರಾದ ಕು.ಮನ್ಯಥಾ.ಎಂ ಮತ್ತು ಕು.ಕೀರ್ತನಾ.ಹೆಚ್.ಬಿ ಯವರು ಇದೆ ಫೆಬ್ರವರಿ 22 ರಿಂದ 27 ರವರೆಗೆ ಹರಿಯಾಣದ ರೋಹ್ತಕ್‌ನಲ್ಲಿ ನಡೆಯಲಿರುವ ಸ್ಪೆಷಲ್ ಒಲಂಪಿಕ್ ಭಾರತ್ ನ ರಾಷ್ಟ್ರ ಮಟ್ಟದ ಹಾಕಿ ಚಾಂಪಿಯನ್‌ ಶಿಪ್ ಕ್ಯಾಂಪಿಗೆ ಆಯ್ಕೆಯಾಗಿದ್ದು ಜೊತೆಗೆ ಮನಃಸ್ಫೂರ್ತಿ ವಿಶೇಷ ಶಾಲೆಯ ಪ್ರಾಂಶುಪಾಲರಾದ ಶ್ರೀ ಮತಿ ಜ್ಯೋತಿ ಅರುಣ್ ಕುಮಾರ್ ರವರು ಕ್ರೀಡಾಪಟುಗಳಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಕೋಚ್ ಆಗಿ ಆಯ್ಕೆಯಾಗಿದ್ದಾರೆ.

Manasadhara Trust ಈ ಕುರಿತು ಮಾನಸ ಸಮೂಹ ಸಂಸ್ಥೆಯು ಸಂತೋಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿಯರ ಪರಿಶ್ರಮ, ಸಮರ್ಪಣೆ ಮತ್ತು ದೃಢನಿಶ್ಚಯವೇ ಈ ಸಾಧನೆಗೆ ಕಾರಣವೆಂದು ತಿಳಿಸಿದೆ. ಮನಃಸ್ಫೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿಯರಿಗೆ ರಾಷ್ಟ್ರ ಮಟ್ಟದ ಹಾಕಿ ಚಾಂಪಿಯನ್‌ಶಿಪ್ ಕ್ಯಾಂಪಿನಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ಸಂಸ್ಥೆಗೆ ಹೆಮ್ಮೆಯ ವಿಚಾರವಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿನಿಯರು ಇನ್ನಷ್ಟು ಉತ್ತಮ ಸಾಧನೆ ಮಾಡಿ ಸಂಸ್ಥೆಯ ಗೌರವ ಹೆಚ್ಚಿಸಲಿ ಎಂದು ಶುಭಾಶಯ ಕೋರಲಾಗಿದೆ. ಫೆಬ್ರವರಿ 22 ರಂದು ಹರಿಯಾಣಕ್ಕೆ ಹೋಗುತ್ತಿರುವ ಕು.ಮನ್ಯಥಾ.ಎಂ, ಕು.ಕೀರ್ತನಾ.ಹೆಚ್.ಬಿ ಮತ್ತು ಶ್ರೀಮತಿ ಜ್ಯೋತಿ ಅರುಣ್ ಕುಮಾರ್ ರವರಿಗೆ ಮಾನಸ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ರಜನಿ.ಎ.ಪೈ, ಶೈಕ್ಷಣಿಕ ನಿರ್ದೇಶಕರಾದ ಡಾ.ಪ್ರೀತಿ.ವಿ.ಶಾನ್ ಭಾಗ್, ಸಂಸ್ಥೆಯ ಖ್ಯಾತ ನರರೋಗ ತಜ್ಞರಾದ ಡಾ. ವಾಮನ್ ಶಾನ್ ಭಾಗ್, ಮನಃಸ್ಫೂರ್ತಿ ಕಲಿಕಾ ಕೇಂದ್ರದ ಪ್ರಾಂಶುಪಾಲರಾದ ಶ್ರೀಮತಿ ರಂಗನಾಯಕಿ ಹಾಗೂ ಮನಃಸ್ಫೂರ್ತಿಯ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...