Wednesday, September 9, 2026
Wednesday, September 9, 2026

Kote Sri Marikamba ಮಾರಿಕಾಂಬೆ ಜಾತ್ರೆ ಪ್ರಯುಕ್ತ ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ಮಾರ್ಗಸೂಚಿ- ಪ್ರಭುಲಿಂಗ ಕವಳಿಕಟ್ಟಿ

Date:

Kote Sri Marikamba ಕೋಟೆ ಶ್ರೀ ಮಾರಿಕಾಂಬ ದೇವರ ಜಾತ್ರಾ ಮಹೋತ್ಸವವು ಫೆ.24 ರಿಂದ 28 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಕಾರಣ ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಹೊಳಬಸ್ ಸ್ಟ್ಯಾಪ್, ಶಂಕರಮಠ ರಸ್ತೆ, ಬಿ.ಹೆಚ್.ರಸ್ತೆ, ಕೋಟೆ ರಸ್ತೆ, ಎಸ್.ಪಿ.ಎಂ.ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಶಿವಪ್ಪ ನಾಯಕ ಸರ್ಕಲ್ ಹಾಗೂ ಸುತ್ತಮುತ್ತ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶ ಹೊರಡಿಸಿದ್ದಾರೆ.
ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು. ಫೆ. 24 ರಿಂದ 28ರವರೆಗೆ ಹೊಳಬಸ್ ಸ್ಟಾಪ್‌ನಿಂದ – ಬೆಕ್ಕಿನ ಕಲ್ಮಠ-ರಾಮಣ್ಣ ಶ್ರೇಷ್ಠಿ ಪಾರ್ಕ್ವರೆಗೆ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು. ಫೆ. 24 ರಂದು ಬೆಳಗ್ಗೆ 3.00 ಗಂಟೆಯಿಂದ ರಾ.11.00 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಗಾಂಧಿ ಬಜಾರ್-ಶಿವಪ್ಪನಾಯಕ ಸರ್ಕಲ್‌ವರೆಗೆ ಮತ್ತು ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು.
Kote Sri Marikamba ಬೆಂಗಳೂರು- ಭದ್ರಾವತಿ-ಎನ್.ಆರ್.ಪುರ ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‌ಗಳು ಎಂಆರ್‌ಎಸ್ ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಚಿತ್ರದುರ್ಗ-ಹೊಳೆಹೊನ್ನೂರು ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‌ಗಳು ವಿದ್ಯಾನಗರ-ಎಂ.ಆರ್.ಎಸ್. ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಹೊನ್ನಾಳಿ-ಹೊಳಲೂರು ಕಡೆಯಿಂದ ಬರುವ ಭಾರಿ ವಾಹನಗಳು, ಸರಕು ಸಾಗಣೆ ವಾಹನಗಳು ಮತ್ತು ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್- ಕೆಇಬಿ ಸರ್ಕಲ್- ರೈಲ್ವೆ ಸ್ಟೇಷನ್-ಉಷಾ ನರ್ಸಿಂಗ್ ಹೋಂ ಸರ್ಕಲ್- 100 ಅಡಿ ರಸ್ತೆ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಶಿಕಾರಿಪುರ ಸವಳಂಗದಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್‌ಗಳನ್ನು ಉಷಾ ನರ್ಸಿಂಗ್ ಹೋಂ, ಲಕ್ಷ್ಮೀ ಟಾಕೀಸ್, ಪೊಲೀಸ್ ಚೌಕಿ, ಆಲ್ಕೋಳ ಮುಖಾಂತರ ಸಾಗರ ರಸ್ತೆಯಲ್ಲಿ ಹೋಗುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಸಂದೇಶ್ ಮೋಟಾರ್ಸ್-ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ಉಷಾ ನರ್ಸಿಂಗ್ ಹೋಂ, ಸವಳಂಗ ರಸ್ತೆ ಮೂಲಕ ಹೋಗುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತೀಗಣ್ಯ ವ್ಯಕ್ತಿಗಳ ವಾಹನಗಳು, ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...