Sunday, April 19, 2026
Sunday, April 19, 2026

Karnataka Open University ರಾಜ್ಯದ ಮುಕ್ತ ವಿವಿಯಿಂದ ವಿವಿಧ ಕೋರ್ಸುಗಳ ಅಧ್ಯಯನಕ್ಕೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Karnataka Open University ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06, ರ ವತಿಯಿಂದ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26ನೇ ಸಾಲಿನ ಶ್ಯೆಕ್ಷಣಿಕ ವರ್ಷದ ಜನವರಿ ಆವೃತಿಯ ಪ್ರಥಮ ವರ್ಷದ ಬಿ.ಎ,/ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಲ್.ಐ.ಸಿ,ಬಿ.ಎಸ್.ಡಬ್ಲ್ಯೂ., ಎಂ.ಎ,/ಎಂ.ಕಾಂ,, ಎಂ.ಎಸ್.ಡಬ್ಲ್ಯೂ, ಎಂ.ಸಿಎ, ಎಂ.ಎಸ್ಸಿ, ಎಂ.ಬಿ.ಎ., ಎಂ.ಎಲ್.ಐ.ಎಸ್ಸಿ., ಪಿ.ಜಿ., ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿಗಾಗಿ ಮಾ.31ರೊಳಗಾಗಿ ಅರ್ಜಿ ಸಲ್ಲಿಸುವಂತೆ ಪ್ರಾದೇಶಿಕ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ ಬೋಧನಾ ಶುಲ್ಕದಲ್ಲಿ ಶೇ 10%, ಡಿಫೆನ್ಸ್ ಹಾಗೂ ಎಕ್ಸ್ ಸರ್ವೀಸ್‌ಮೆನ್ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ 10%, ಬ್ಯಾಡ್ಜ್ ಹೊಂದಿರುವ ಆಟೋ ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ 10% ರಿಯಾಯಿತಿ ನೀಡಲಾಗುತ್ತದೆ ಹಾಗೂ ತೃತೀಯಾ ಲಿಂಗದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿಯನ್ನು ನೀಡಲಾಗುತ್ತಿದೆ. ಐ.ಟಿ.ಐ. ಹಾಗೂ ಡಿಪ್ಲೋಮಾ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರಥಮಬಿ.ಎ/ಬಿ.ಕಾಂ ಪ್ರವೇಶಾತಿಗೆ ಅವಕಾಶವಿರುತ್ತದೆ. ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸಂಬಂಧ ಪಟ್ಟ ದಾಖಲಾತಿಗಳನ್ನು ನೀಡಿದಲ್ಲಿ ವಿದ್ಯಾರ್ಥಿ ವೇತನವನ್ನು ಸರ್ಕಾರದಿಂದ ಪಡೆಯಬಹುದಾಗಿರುತ್ತದೆ.
Karnataka Open University ಹೆಚ್ಚಿನ ಮಾಹಿತಿಗಾಗಿ ಸ್ವಾಮಿ ಬಿ.ಎಮ್ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರ, ಆಲ್ಕೋಳ, ಸರ್ಕಲ್, ಎಲ್.ಐ.ಸಿ. ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ, ದೂ.ಸಂ.: 9900667916/ 9739803295/ 9480765905 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...