Thursday, July 23, 2026
Thursday, July 23, 2026

ಸ್ವಾಭಿಮಾನ ಮತ್ತು ಸಂಘಟನೆಯ ಮೂಲಕ ಮಾದಿಗ ಸಮಾಜ ಮುಂದೆ ಬರಬೇಕು-ಶಿವಾಜಿ

Date:

ಸ್ವಾಭಿಮಾನ ಮತ್ತು ಸಂಘಟನೆಯ ಮೂಲಕ ಮಾದಿಗ ಸಮಾಜ ಮುಂದೆ ಬರಬೇಕು, ಮಕ್ಕಳನ್ನು ಉತ್ತಮ ಶಿಕ್ಷಿತರನ್ನಾಗಿಸಬೇಕು ಎಂದು ಕರ್ನಾಟಕ ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಾಜಿ ಕರೆ ನೀಡಿದರು.
ತಾಲೂಕಿನ ಆನವಟ್ಟಿಯ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಮಾದರ ಮಹಾಸಭಾದ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳ ಆಯ್ಕೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾದರ ಮಹಾಸಭಾದ ಮುಖ್ಯ ಉದ್ದೇಶ ಕಡು ಬಡವರಿಗೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು, ಸಮಾಜದಲ್ಲಿ ಪಕ್ಷಾತೀತವಾಗಿ ಎಲ್ಲರೂ ಒಗ್ಗೂಡಬೇಕು. ಈ ಮೂಲಕ ಮುಂದುವರೆದ ಸಮಾಜದಂತೆ ಬದುಕು ಕಟ್ಟಿಕೊಂಡು ಸಮಾಜದ ಏಳಿಗೆಗೆ ಶ್ರಮಿಸಬೇಕು ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಎಚ್. ಮುನಿಯಪ್ಪ ಅವರ ಮಾರ್ಗದರ್ಶನ ಮತ್ತು ಹಿರಿಯರ ಆಶೀರ್ವಾದದಿಂದ ಸಂಘಟನೆ ಬಲಿಷ್ಠವಾಗುತ್ತಿದೆ ಎಂದರು
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾಗಿ ಗುಡ್ಡಪ್ಪ ದೊಡ್ಡಮನಿ ಅವರನ್ನು ಆಯ್ಕೆ ಮಾಡಲಾಯಿತು, ಗೌರವಾಧ್ಯಕ್ಷರಾಗಿ ನಾಗರಾಜ ಆನವಟ್ಟಿ, ಉಪಾಧ್ಯಕ್ಷರಾಗಿ ಲಿಂಗರಾಜ ನೀರಲಿಗಿ, ಹನುಮಂತಪ್ಪ ತಲ್ಲೂರು, ಕಾರ್ಯದರ್ಶಿಗಳಾಗಿ ರಮೇಶ್ ಗಿಣಿವಾಲ, ಅಭಿಲಾಷ್ ಎನ್. ಹುರುಳಿ ಕೊಪ್ಪ ಅವರನ್ನು ಆಯ್ಕೆಮಾಡಿ ಅಭಿನಂದಿಸಲಾಯಿತು.
ಲೋಕೇಶ್ ತಿಮ್ಲಾಪುರ, ಹೊಳಿಯಪ್ಪ ಗಾಮಾ, ಮಂಜಣ್ಣ ಬೀರನಕರೆ, ನಾಗರಾಜ ಹುರುಳಿ ಕೊಪ್ಪ ಸೇರಿದಂತೆ ತಾಲೂಕು ಮತ್ತು ಸುತ್ತಲಿನ ಹತ್ತಾರು ಗ್ರಾಮಗಳ ನೂರಾರು ಸಮಾಜ ಬಾಂಧವರು ಸೇರಿದ್ದರು.
ಪ್ರಸ್ತಾವಿಕವಾಗಿ ನಾಗಪ್ಪ ಮಾಸ್ತರ್ ಮಾತನಾಡಿದರು. ಅಭಿಲಾಷ್ ಹುರುಳಿಕೊಪ್ಪ ಸ್ವಾಗತಿಸಿದರು. ನಾಗರಾಜ ಹುರುಳಿಕೊಪ್ಪ ಕ್ರಾಂತಿಗೀತೆ ಹಾಡಿದರು.
ಫೋಟೋ
೨೩ ಸೊರಬ ೦೧ : ಸೊರಬ ತಾಲೂಕಿನ ಆನವಟ್ಟಿಯ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಮಾದರ ಮಹಾಸಭಾದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...