ಪ್ರತಿ ನಿತ್ಯ ಮಕ್ಕಳಿಗೆ ಶಿಸ್ತು,ಕ್ರೀಡೆಯ ಬಗ್ಗೆ ಹರಿವು ಮೂಡಿಸುವಂತಹ ಕೆಲಸವನ್ನು ಮಾಡುತ್ತಿರುವ ಶಿಕ್ಷಕರು,ಇಂದು ಪ್ರತಿನಿತ್ಯ ಕೆಲಸದ ಒತ್ತಡದಿಂದ ಒಂದು ದಿನ ಬಿಡುವು ಮಾಡಿಕೊಂಡು ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡೆಯಲ್ಲಿ ಭಾಗವಹಿಸಿ ಅವರ ಬಾಲ್ಯದ ನೆನಪು ಮಾಡಿಕೊಳ್ಳುವಂಥ ಒಂದು ಸಂದರ್ಭದ ದಿನ ಎಂದು ತಾಲ್ಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಾಳನಾಯ್ಕ ಅಭಿಪ್ರಾಯಪಟ್ಟರು.
ಅವರು ಶಿವಮೊಗ್ಗದ ಶಾರದಾದೇವಿ ಅಂದರ ವಿಕಾಸ ಶಾಲಾ ಕ್ರೀಡಾಂಗಣದಲ್ಲಿ ಸ್ನೇಹ ಮಿಲನ ಸಂಸ್ಥೆ ವತಿಯಿಂದ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ಆಯೋಜಿಸಲಾಗಿದ್ದ ಶಿವಮೊಗ್ಗ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ನಾಲ್ಕನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಾತನಾಡುತ್ತಾ, ಕ್ರೀಡಾಕೂಟದಲ್ಲಿ ಪ್ರೀತಿ,ವಿಶ್ವಾಸದಿಂದ ಭಾಗವಹಿಸಿ,ವರ್ಷಕ್ಕೊಮ್ಮೆ ಇಂತಹ ಕ್ರೀಡೆಗಳು ಶಿಕ್ಷಕರಿಗೆ ಅಗತ್ಯವಾಗಿ ಬೇಕಾಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾ. ಹ. ತಿಮ್ಮೇನಹಳ್ಳಿ ಮಾತನಾಡುತ್ತಾ,ಕ್ರೀಡೆಯನ್ನು ಆಯೋಜನೆ ಮಾಡಿರುವಂತಹ ನವೀನ್ ರವರ ಕಾರ್ಯ ವೈಕರಿಯನ್ನು ಶ್ಲಾಗಿಸಿದರು. ಇದೇ ಸಂದರ್ಭದಲ್ಲಿ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಸಮವಸ್ತ್ರದೊಂದಿಗೆ, ಸುಮಾರು 6 ತಂಡಗಳು ಲೀಗ್ ಮಾದರಿಯ ಕ್ರಿಕೆಟ್ ನಲ್ಲಿ ಪ್ರೀತಿ,ವಿಶ್ವಾಸ,ಸಂತೋಷದಿಂದ ಭಾಗವಹಿಸುತ್ತಿರುವುದು ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲಿ ಇನ್ನೂ ವಿಶೇಷವಾಗಿ ಕ್ರೀಡೆಗಳನ್ನು ಆಯೋಜನೆ ಮಾಡೋಣ ಎಂದು ತಮ್ಮ ವೃತ್ತಿ ಬಾಂಧವರಿಗೆ ತಿಳಿಸಿದರು.
ವಿಜೇತ ತಂಡಗಳಿಗೆ ಅತ್ಯಾಕರ್ಷಕ ಟ್ರೋಪಿ,ವೈಯಕ್ತಿಕ ಬಹುಮಾನಗಳು ನೀಡಿ ಗೌರವಿಸಲಾಯಿತು.ಇದೇ ಸಂದರ್ಭದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ ಸಂಸ್ಥೆಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವೀನ್ ವಹಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳ ಮನಸ್ಸಿನಲ್ಲಿ ಯಾವತ್ತೂ ನೆನಪಿನಲ್ಲಿರು ವಂತಹ ಯಾರಾದರೂ ಶಿಕ್ಷಕರಿದ್ದಾರೆ ಅಂದರೆ ಅದು ದೈಹಿಕ ಶಿಕ್ಷಣ ಶಿಕ್ಷಕರು ಮಾತ್ರ, ಆತನನ್ನು ತಿದ್ದಿ,ತೀಡಿ,ಶಿಸ್ತಿನಿಂದ ಒಬ್ಬ ಸತ್ಪ್ರಜೆಯನ್ನಾಗಿ ಮಾಡುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ತರವಾದದ್ದು ಎಂದರು.
ಶಿವಮೊಗ್ಗ ಜಿಲ್ಲಾ ಅನುದಾನಕಾರ್ಯದರ್ಶಿ ಮಹೇಶ್ ಹುಲ್ಲತ್ತಿ, ಸೋಮಶೇಖರ್, ರಾಕೇಶ್, ಯೋಗೀಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಬಾಲ್ಯದ ನೆನಪು ಕೊಡುವ ಕ್ರೀಡಾಕೂಟಗಳು ಶಿಕ್ಷಕರಿಗೂ ಅಗತ್ಯವಾಗಿದೆ- ಕಾಳನಾಯ್ಕ
Date:
