Sunday, June 7, 2026
Sunday, June 7, 2026

DVS College of Arts, Science and Commerce ಈಗ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ : ಕೆ.ಎಸ್.ಶ್ರೀಕಾಂತ್

Date:

DVS College of Arts, Science and Commerce ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸುವಲ್ಲಿ ಜನರು ಹೆಚ್ಚಿನ ಆಸಕ್ತಿ ಹೊಂದಿದ್ದು, ಪ್ರತಿ ವರ್ಷ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತದೆ ಎಂದು ಕುವೆಂಪು ವಿವಿ ಪ್ರವಾಸೋದ್ಯಮ ನಿರ್ವಹಣೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಎಸ್.ಶ್ರೀಕಾಂತ್ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಸಮಾಜ ಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಮತ್ತು ನಿರ್ವಹಣೆ ವಿಷಯ ಕುರಿತು ಮಾತನಾಡಿದರು.

ಪ್ರವಾಸಕ್ಕೆ ಹೊರಡುವ ವ್ಯಕ್ತಿಯು ಅನೇಕ ಅಂಶಗಳನ್ನು ಪರಿಗಣಿಸಿ ವರ್ಷದಲ್ಲಿ ಆಗಾಗ್ಗೆ ಪ್ರವಾಸ ಕೈಗೊಳ್ಳುತ್ತಾನೆ. ಪ್ರವಾಸಿ ಸ್ಥಳದ ಮಾಹಿತಿ, ಊಟ ವಸತಿ ಸೌಲಭ್ಯ, ಪ್ರಯಾಣ ಮಾಡುವ ರಸ್ತೆ ಹೀಗೆ ಅನೇಕ ಅಂಶಗಳು ಪ್ರವಾಸಿ ಸ್ಥಳದ ಮಹತ್ವ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್ ಮಾತನಾಡಿ, ಪ್ರವಾಸೋದ್ಯಮ ಎಂದರೆ ಅದೊಂದು ಆರ್ಥಿಕತೆಯ ಉದ್ಯಮ. ಈಗ ನಮ್ಮ ಭಾರತದಲ್ಲಿ ಸಣ್ಣ ಹಳ್ಳಿ, ಗುಡಿಸಲುಗಳಿಗೂ ತುಂಬಾ ಬೇಡಿಕೆ ಬರುವ ಸಾಧ್ಯತೆ ಇದೆ. ಏಕೆಂದರೆ ನಗರ ಜೀವನಕ್ಕೆ ಬೇಸತ್ತು ತಮ್ಮ ಆತ್ಮ ಸಂತೋಷಕ್ಕಾಗಿ ಪ್ರಕೃತಿಯ ಮಡಿಲಲ್ಲಿ ಇರುವ ಗುಡಿಸಲು, ಜಲಪಾತಗಳನ್ನು ನೋಡಿ ಜೀವನವನ್ನು ಕಳೆಯಲು ಬಯಸುತ್ತಾರೆ ಎಂದು ತಿಳಿಸಿದರು.

DVS College of Arts, Science and Commerce ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜಿ.ಎಸ್.ಪರಮೇಶ್ ಮಾತನಾಡಿ, ಪ್ರವಾಸೋದ್ಯಮ ಎನ್ನುವುದು ಕೇವಲ ಸ್ಥಳದ ಭೇಟಿಯಲ್ಲ ನಮ್ಮ ದೃಶ್ಯಮಾಧ್ಯಮದಲ್ಲಿ ಸ್ಥಳವನ್ನು ವೀಕ್ಷಿಸುವುದಲ್ಲ. ಬದಲಾಗಿ ಸ್ಥಳದ ಹಿನ್ನೆಲೆ, ಸಂಸ್ಕೃತಿ, ಸ್ಥಳದ ಮೌಲ್ಯ, ಜನರ ಜೀವನಶೈಲಿಗಳನ್ನು ತಿಳಿದುಕೊಳ್ಳುವುದು ಮತ್ತು ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಾಗಿಸುವ ವೇದಿಕೆಯೇ ಪ್ರವಾಸೋದ್ಯಮ ಆಗಿದೆ ಎಂದು ತಿಳಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಚ್.ಎಸ್.ಪವಿತ್ರಾ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...