Wednesday, September 9, 2026
Wednesday, September 9, 2026

Department of Tourism ಮೊಬೈಲ್ ಕ್ಯಾಂಟೀನ್ ಆರಂಭಿಸಲು ಪ.ಜಾ/ ಪ.ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Date:

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿಗೆ ಸೇರಿದ 06 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 04 ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 20 ರಿಂದ 55 ವರ್ಷದೊಳಗಿನವರಾಗಿದ್ದು, 10ನೇ ತರಗತಿ ಉತ್ತೀರ್ಣ ಪ್ರಮಾಣ ಪತ್ರ, ಆಧಾರ್ ಪ್ರತಿ, ಲಘು ವಾಹನ ಚಾಲನಾ ಪರವಾನಗಿ, ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಬ್ಯಾಂಕ್‌ನಿಂದ ಸಾಲ ಪಡೆಯಲು ಅರ್ಹತೆ ಹೊಂದಿರುವ ಬಗ್ಗೆ ಮಂಜೂರಾತಿ/ದೃಢೀಕರಣ ಪತ್ರ ಹಾಗೂ ಇಲಾಖೆಯಿಂದ ನೀಡಲಾಗುವ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಡ್ಡಾಯವಾಗಿ ಪಡೆಯುವುದಾಗಿ ಪ್ರಮಾಣ ಪತ್ರ, ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ/ಮಂಡಳಿಗಳಲ್ಲಿ ಖಾಯಂ ನೌಕರಿಯಾಗಿಲ್ಲವೆಂಬ ಸ್ವಯಂ ಘೋಷಣೆಯನ್ನು ಸಲ್ಲಿಸಬೇಕು ಮತ್ತು ಅರ್ಜಿಯೊಂದಿಗೆ ಸಲ್ಲಿಸುವ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು.
Department of Tourism ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್, 3ನೇ ತಿರುವು ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಈ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಮಾ.13 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಆದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...