Thursday, July 23, 2026
Thursday, July 23, 2026

ಮೇ ತಿಂಗಳಿನಲ್ಲಿ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ

Date:

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ KRDCL ವತಿಯಿಂದ ರೂ. 125.67ಕೋಟಿಗಳ ಅಂದಾಜು ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ಮಸಾoತ್ಯದೊಳಗೆ ಜನಸಂಚಾರಕ್ಕೆ ಮುಕ್ತ ಗೊಳಿಸಿ ಕೊಡಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ಅವರು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಹಸಿರುಮಕ್ಕಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಹಿಂನೀರಿನ ಲಾಂಚ್ ನಲ್ಲಿ ಪ್ರಯಾಣಿಸಿ, ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿದರು.

ನಂತರ ಮಾತನಾಡಿದ ಅವರು ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಅಗತ್ಯವಿರುವ 56.14 ಕೋಟಿ ರೂ ಅನುದಾನವನ್ನು ಬಿಡುಗಡೆಗೊಳಿಸಿ, ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದ ಅವರು ಮೇ ಮಾಹೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆಗೊಳಿಸಲಾಗುವುದು ಎಂದರು.

ಈ ಸೇತುವೆಯ ನಿರ್ಮಾಣದಿಂದಾಗಿ ಶರಾವತಿ ಸಂತ್ರಸ್ತ ಗ್ರಾಮಗಳಿರುವ ಆರು ಪಂಚಾಯಿತಿಗಳ ನಿವಾಸಿಗಳಿಗೆ ಹಾಗೂ ಸಾಗರ ಪಟ್ಟಣದಿಂದ ಕೊಲ್ಲೂರಿಗೆ 32ಕೀ. ಮೀ. ಅಂತರ ಕಡಿತಗೊಳ್ಳಲಿದೆ ಎಂದರು.

ಪ್ರಸ್ತುತ ಪ್ರಗತಿಯಲ್ಲಿರುವ ಕಾಮಗಾರಿಯಲ್ಲಿ ಬಳಸಲಾಗುತ್ತಿರುವ ದೈತ್ಯ ಕಾಂಕ್ರೀಟ್ ಬ್ಲಾಕ್ ಗಳಲ್ಲಿ ಗುಣಮಟ್ಟದ ಕೊರತೆ ಹಾಗೂ ಬ್ಲಾಕ್ ನ ಕ್ಷಮತೆಯಲ್ಲಿ ನ್ಯೂನತೆಗಳಿದ್ದಿದ್ದರಿಂದಾಗಿ ಬದಲಿ ವ್ಯವಸ್ಥೆ ಕಲ್ಪಿಸುವಲ್ಲಿ ವಿಳಂಬ ವಾಗಿದೆ. ಅದಾಗಿಯೂ ಇನ್ನೂ ವಿಳಂಬಕ್ಕೆ ಅವಕಾಶ ವಿಲ್ಲದಂತೆ ಸೇತುವೆ ಲೋಕಾರ್ಪಣೆಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಸಾಗರ ಪಟ್ಟಣದ ರಸ್ತೆ ಅಗಲೀಕರಣ ಕಾಮಗಾರಿ ಕೈಗೆಟ್ಟಿಕೊಂಡಿದ್ದು, ಈಗಾಗಲೇ ಎರಡು ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಭೂ ಪರಿಹಾರ ಮೊತ್ತ ಉಳಿಕೆ 11ಕೋಟಿ ರೂ. ಗಳನ್ನು ಈ ಕೂಡಲೇ ಮಂಜೂರು ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮಾತನಾಡಿ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನವರ ಅಪೇಕ್ಷೆಯಂತೆ ಮಾನ್ಯ ಲೋಕೋಪಯೋಗಿ ಸಚಿವರು ಸೇತುವೆ ನಿರ್ಮಾಣ ಕಾರ್ಯಕ್ಕೆ ವೇಗ ಹೆಚ್ಚಿಸಿದ್ದು, ಶೀಘ್ರದಲ್ಲಿ ಲೋಕಾರ್ಪಣೆ ಮಾಡುವ ಭರವಸೆ ನೀಡಿರುವುದು ಸಂತಸ ತಂದಿದೆ ಎಂದ ಅವರು, ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಂಬಂದಿಸಿದ ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ಕರೆಸಿ, ನಡೆಸಿದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎಂದರು.

ಈ ಸೇತುವೆ ನಿರ್ಮಾಣ ಕಾರ್ಯದಲ್ಲಿ ಹಸಿರುಮಕ್ಕಿ ಭಾಗದ ನಿವಾಸಿಗಳು ಅತಿ ಹೆಚ್ಚು ಕಾತರರಾಗಿದ್ದಾರೆ ಎಂದರು.ಸದರಿ ಸೇತುವೆ ನಿರ್ಮಿಸುವುದರಿಂದ ಮದ್ಯ ಕರ್ನಾಟಕ, ಉತ್ತರ ಕರ್ನಾಟಕ ಭಾಗದಿಂದ ಕರಾವಳಿ ಭಾಗಕ್ಕೆ ಸಂಪರ್ಕ ಏರ್ಪಡ ಲಿದೆ. ಸಾಗರದಿಂದ ಕೊಲ್ಲೂರು, ಉಡುಪಿ, ಮುಂತಾದ ಯಾತ್ರಾ ಸ್ಥಳಗಳಿಗೆ ತೆರಳುವ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಮಂಗಳೂರು ಪಟ್ಟಣ, ಮಂಗಳೂರು ಬಂದರು ಮತ್ತು ಕುಂದಾಪುರ ಪಟ್ಟಣಗಳಿಗೆ ಸಮೀಪವಾಗಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...