BMTC ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ದಿನಾಂಕ 21 ಫೆಬ್ರವರಿ 2026 ರಂದು ಮೃತ ನೌಕರರ ಅವಲಂಬಿತರಿಗೆ ಅನುಕಂಪ ಆಧಾರಿತ ನೇಮಕಾತಿ ಆದೇಶ ಪತ್ರಗಳ ವಿತರಣೆ ಹಾಗೂ ಅಪಘಾತ ಮತ್ತು ಗುಂಪು ವಿಮಾ ಪರಿಹಾರ ಮೊತ್ತದ ಚೆಕ್ಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವು ಗೌರವಾನ್ವಿತ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರ ಸಾನ್ನಿಧ್ಯದಲ್ಲಿ ನೆರವೇರಿತು.
BMTC ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ವಿ.ಎಸ್. ಆರಾಧ್ಯ ಹಾಗೂ ಉಪಾಧ್ಯಕ್ಷರಾದ ನಿಕೇತ್ ರಾಜ್ ಎಂ. ಅವರೊಂದಿಗೆ ಶ್ರೀ ಕೆ.ಬಿ. ಶಿವಕುಮಾರ್, ಭಾ.ಆ.ಸೇ., ವ್ಯವಸ್ಥಾಪಕ ನಿರ್ದೇಶಕರು; ಶ್ರೀ ಅಬ್ದುಲ್ ಅಹದ್, ಭಾ.ಪೊ.ಸೇ., ನಿರ್ದೇಶಕರು ( ಭದ್ರತಾ ಮತ್ತು ಜಾಗೃತ); ಶ್ರೀಮತಿ ಶಿಲ್ಪಾ ಎಂ., ಭಾ.ಆ.ಸೇ., ನಿರ್ದೇಶಕರು (ಮಾಹಿತಿ ತಂತ್ರಜ್ಞಾನ), ಶ್ರೀ ಕೆ. ಕಲಿ, ಉಪ ಪ್ರಧಾನ ವ್ಯವಸ್ಥಾಪಕರು, ವಲಯ ಕಚೇರಿ – ಕೆನರಾ ಬ್ಯಾಂಕ್, ಶ್ರೀ ಅಲೋಕ್ ಕುಮಾರ್ ಚತುರ್ವೇದಿ, ಉಪ ಪ್ರಧಾನ ವ್ಯವಸ್ಥಾಪಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
