Sunday, June 7, 2026
Sunday, June 7, 2026

B. Y. Raghavendra ಊರಗಡೂರಿನ ಮೃತ ವಿದ್ಯಾರ್ಥಿ ಸಂಕೇತ್ ಮನೆಗೆ ಸಂಸದ ರಾಘವೇಂದ್ರ ಭೇಟಿ. ಕುಟುಂಬಸ್ಥರಿಗೆ ಸಾಂತ್ವನ.

Date:

B. Y. Raghavendra ಶಿವಮೊಗ್ಗದ ಊರುಗಡೂರಿನ ಸೂಳೆಬೈಲಿನಲ್ಲಿ ಗಾಂಜಾ ನಶೆಯಲ್ಲಿದ್ದ ಮತಾಂಧ ಪುಂಡರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ನನ್ನು ಅಮಾನುಷವಾಗಿ ಹಲ್ಲೆ ಮಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರಾದ ಬಿ.ವೈ. ರಾಘವೇಂದ್ರ ಅವರು , ಮೃತ ಸಂಕೇತ್ ಅವರ ನಿವಾಸಕ್ಕೆ ಭೇಟಿ ನೀಡಿ, ದುಃಖತಪ್ತ ಕುಟುಂಬವರ್ಗದವರಿಗೆ ಸಾಂತ್ವಾನ ಹೇಳಿದರು.

ಆಸರೆಯಾಗಬೇಕಿದ್ದ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಕಂಡು ಮನಸ್ಸಿಗೆ ಅತೀವ ಸಂಕಟವಾಯಿತು. ಭಗವಂತನು ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

B. Y. Raghavendra ಈ ದುರ್ಘಟನೆಗೆ ಹೊಣೆಗಾರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಬಂಧಿಸಿ ಕಾನೂನಿನ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಜೊತೆಗೆ, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ನೀಡಿ, ಅಗತ್ಯ ನೆರವು ಒದಗಿಸಬೇಕು ಎಂದು ಹೇಳಿದರು.

ಜನರ ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಬೇಕು. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...