Thursday, February 26, 2026
Thursday, February 26, 2026

Rotary Club Shivamogga ಸೇವಾ ಮನೋಭಾವ ಬೆಳೆಸುತ್ತಿರುವ ರೋಟರಿ ಸೇವೆ ಶ್ಲಾಘನೀಯ: ಓಂಗಣೇಶ್ ಉಪ್ಪುಂದ

Date:

Rotary Club Shivamogga ರೋಟರಿ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುವ ಮೂಲಕ ವಿಶ್ವಾದ್ಯಂತ ಸೇವಾ ಕಾರ್ಯ ನಡೆಸುತ್ತಿದೆ ಎಂದು ನಟ ಓಂಗಣೇಶ್ ಉಪ್ಪುಂದ ಹೇಳಿದರು.

ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ವಲಯ 10 ಮತ್ತು 11ರ ವತಿಯಿಂದ ಆಯೋಜಿಸಿದ್ದ ವಿಶ್ವ ತಿಳವಳಿಕೆ ಮತ್ತು ಶಾಂತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್ಲರನ್ನು ಒಳಗೊಂಡು ಸೇವಾ ಮನೋಭಾವ ಬೆಳೆಸುವ ಕೆಲಸ ಮಾಡುತ್ತಿರುವ ರೋಟರಿ ಸೇವೆ ಶ್ಲಾಘನೀಯ ಎಂದು ತಿಳಿಸಿದರು.

ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ರೋಟರಿ ಸಂಸ್ಥೆಯಲ್ಲಿ ಎಲ್ಲರೂ ಒಟ್ಟಾಗಿ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದು, ರೋಟರಿ ಸದಸ್ಯರ ಸಂಖ್ಯೆ ಹೆಚ್ಚಿಸುವಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್ ಮೂರ್ತಿ ಮಾತನಾಡಿ, ರೋಟರಿ ಸದಸ್ಯರ ವಿಸ್ತರಣೆಗೆ ರೋಟರ‍್ಯಾಕ್ಟ್ ಕ್ಲಬ್‌ಗಳ ವಿಸ್ತರಣೆ ಬಹು ಮುಖ್ಯ. ರೋಟರಿ ವಿಶ್ವ ತಿಳುವಳಿಕೆ ಮತ್ತು ಶಾಂತಿ ದಿನದಂದು ಸಂಸ್ಕೃತಿ, ರಾಷ್ಟ್ರ ಮತ್ತು ನಂಬಿಕೆಗಳಾದ್ಯಂತ ಜನರನ್ನು ಸಂಪರ್ಕಿಸಿವ ಏಕತೆ ಮನೋಭಾವವನ್ನು ನಾವು ಆಚರಿಸುತ್ತೇವೆ ಎಂದು ಹೇಳಿದರು.

ನಿಜವಾದ ಶಾಂತಿ ಇತರರಿಗೆ ತಿಳುವಳಿಕೆ. ಸಹಾನುಭೂತಿ ಮತ್ತು ಸೇವೆಯಿಂದ ಪ್ರಾರಂಭವಾಗುತ್ತದೆ ಎಂದು ರೋಟರಿ ನಮಗೆ ನೆನಪಿಸುತ್ತದೆ. ಒಂದುಗೊಡಿ ಕೆಲಸ ಮಾಡುವ ಮೂಲಕ ಮತ್ತು ಸೇವೆಯನ್ನು ಹೆಚ್ಚಾಗಿ ಮಾಡುವ ಮೂಲಕ ನಾವು ಸ್ನೇಹದ ಸೇತುವೆಗಳನ್ನು ನಿರ್ಮಿಸಿ ಭವಿಷ್ಯದ ಪೀಳಿಗೆಗೆ ಹೆಚ್ಚು ಶಾಂತಿಯುತ ಮತ್ತು ಭರವಸೆಯ ಜಗತ್ತನ್ನು ರಚಿಸಬಹುದು ಎಂದು ತಿಳಿಸಿದರು.

Rotary Club Shivamogga ರೋಟರಿ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ಲಕ್ಷ್ಮಣ್ ಗೌಡ, ತರಬೇತುದಾರ ನಾಗರಾಜ್, ಸುರೇಶ, ವಲಯ ಕಾರ್ಯದರ್ಶಿ ಮೋಹನ್, ಜೆ.ರಾಧಾಕೃಷ್ಣ, ಶಂಕರ್, ಜಗದೀಶ ಸರ್ಜಾ, ರಂಗರಾಜನ್, ಕಿರಣಕುಮಾರ್, ಚಂದ್ರಶೇಖರ್, ಪ್ರಕಾಶ್ ಜಿ.ಎನ್., ಕಾರ್ಯದರ್ಶಿ ರಶ್ಮಿ, ಇವೆಂಟ್ ಕಾರ್ಯದರ್ಶಿ ಮಂಜುಳಾ ರಾಜು, ರೋಟರಿ ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಸರ್ಕಾರಿ ನೇಮಕಾತಿ ಬಗ್ಗೆ ಈ ಸಲದ ಬಜೆಟ್ ನಲ್ಲಿ ತಿಳಿಸಲಾಗುವುದು: ಸಿದ್ಧರಾಮಯ್ಯ

CM Siddharamaiah ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ,...

D.K. Shivakumar ಹಿಮೋಫೀಲಿಯ ಪೀಡಿತ ಒಬ್ಬ ರೋಗಿಗೆ ವರ್ಷಕ್ಕೆ ರೂ 5 ಲಕ್ಷ ಖರ್ಚಾಗುತ್ತದೆ : ಡೀಸಿಎಂ ಡಿ.ಕೆ.ಶಿವಕುಮಾರ್

D.K. Shivakumar ಹಿಮೋಫಿಲಿಯಾ ಅಪರೂಪದ ಕಾಯಿಲೆ. ಹಿಮೋಫಿಲಿಯಾ ರೋಗಿಗಳಿಗೆ ತಿಂಗಳಿಗೆ ಒಂದು...

Krishna Bhairegowda ಸಂಪೂರ್ಣ – ಸರಳ ಏಕೀಕೃತ ಭೂ- ನಿರ್ವಹಣಾ ವ್ಯವಸ್ಥೆಗೆ ಸರ್ಕಾರದ ದಿಟ್ಟ ಹೆಜ್ಜೆ- ಸಚಿವ ಕೃಷ್ಣ ಭೈರೇಗೌಡ

Krishna Bhairegowda ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ...

MESCOM ಫೆ.27& 28 ರಂದು ಶಿವಮೊಗ್ಗದ ಕುವೆಂಪು ನಗರ ,ಸೂಡ ಸಿ & ಡಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ನಿಲುಗಡೆ

MESCOM ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ...