Thursday, July 23, 2026
Thursday, July 23, 2026

CM Siddharamaiah ಸರ್ಕಾರಿ ನೇಮಕಾತಿ ಬಗ್ಗೆ ಈ ಸಲದ ಬಜೆಟ್ ನಲ್ಲಿ ತಿಳಿಸಲಾಗುವುದು: ಸಿದ್ಧರಾಮಯ್ಯ

Date:

CM Siddharamaiah ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.

CM Siddharamaiah ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸದ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...

Dr. G. Parameshwara ಎಸ್ ಐ ಆರ್ ಪ್ರಕ್ರಿಯೆ: ಜನರಿಗೆ ತೊಂದರೆಯಾಗದಂತೆ ಕ್ರಮ- ಡಾ.ಜಿ.ಪರಮೇಶ್ವರ

Dr. G. Parameshwara ಕೇಂದ್ರ ಸರ್ಕಾರದ ಎಸ್‌ಐಆರ್‌ ಪ್ರಕ್ರಿಯೆಗೆ ಅಗತ್ಯ...