S.N. Channabasappa ಶಿವಮೊಗ್ಗ ನಗರದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಇಂದು ವಾರ್ಡ್ ಸಂಖ್ಯೆ 05ರಲ್ಲಿ ಬರುವ ಇಂದಿರಾ ಬಡಾವಣೆ ಮತ್ತು ಅಪೂರ್ವ ಬಡಾವಣೆಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, “ನಗರದ ಪ್ರತಿಯೊಂದು ಬಡಾವಣೆಗಳಿಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಇಂದಿರಾ ಮತ್ತು ಅಪೂರ್ವ ಬಡಾವಣೆಗಳ ನಿವಾಸಿಗಳ ದೀರ್ಘಕಾಲದ ಬೇಡಿಕೆಯಾಗಿದ್ದ ರಸ್ತೆ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದ್ದು, ಗುಣಮಟ್ಟದ ಕೆಲಸಕ್ಕೆ ಆದ್ಯತೆ ನೀಡುವಂತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ,” ಎಂದು ತಿಳಿಸಿದರು.
S.N. Channabasappa ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಮುಖರಾದ ಮಲ್ಲಿಕಾರ್ಜುನ, ಹರೀಶ್, ಮಾಲತೇಶ್, ಪುರಲೆ ನಾಗರಾಜ್, ಆನಂದ್ ಹಾಗೂ ಬಡಾವಣೆಯ ಹಿರಿಯರು ಮತ್ತು ನಾಗರಿಕರು ಉಪಸ್ಥಿತರಿದ್ದರು.
