Sunday, August 2, 2026
Sunday, August 2, 2026

ವೈಜ್ಞಾನಿಕ ಆವಿಷ್ಕಾರಗಳಿಂದ ಜೀವನ ವಿಧಾನದಲ್ಲಿ ಗಣನೀಯ ಬದಲಾವಣೆ ಸಾಧ್ಯ :ಡಾ. ಎ.ಎಸ್ ಕಿರಣ್ ಕುಮಾರ್

Date:

ನೂತನ ವೈಜ್ಞಾನಿಕ ಆವಿಷ್ಕಾರಗಳಿಂದ ಜನರಿಗೆ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಮೂಲಕ ಅವರ ಜೀವನ ವಿಧಾನದಲ್ಲಿ ಗಣನೀಯ ಬದಲಾವಣೆ ಸಾಧ್ಯವಾಗಲಿದೆ ಎಂದು ಇಸ್ರೋದ ಮಾಜಿ ಅಧ್ಯಕ್ಷರಾಗಿದ್ದ ಡಾ. ಎ.ಎಸ್ ಕಿರಣ್ ಕುಮಾರ್ ಅವರು ಹೇಳಿದರು.
ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು ಹಾಗೂ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗಾಗಿ ಮಲ್ಲಿಗೇನಹಳ್ಳಿಯ ಸನ್ನಿಧಿ ಚರ್ಚ್ ಇನ್ಸ್ಟಿಟ್ಯೂಟ್ನಲ್ಲಿ ಏರ್ಪಡಿಸಲಾಗಿದ್ದ ನಾನು ವಿಜ್ಞಾನಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಅನಾದಿ ಕಾಲದಿಂದ ಇಂದಿನ ಆಧುನಿಕ ಯುಗದವರೆಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೊಡುಗೆ ಅತ್ಯಂತ ಮಹತ್ವದ್ದಾಗಿವೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ವಿಶ್ವದ ಪ್ರಮುಖ ಬಾಹ್ಯಾಕಾಶ ಸಂಸ್ಥೆಗಳಲ್ಲಿ ಒಂದಾಗಿದ್ದು, ಚಂದ್ರಯಾನ-೧ ರ ಮೂಲಕ ಚಂದ್ರನ ಮೇಲೆ ನೀರಿನ ಅಣುಗಳನ್ನು ಪತ್ತೆ ಹಚ್ಚಿದೆ ಮಾತ್ರವಲ್ಲ ಮಂಗಳಯಾನದ ಮೊದಲ ಯತ್ನದಲ್ಲೇ ಯಶಸ್ಸು ಕಂಡಿರುವುದು ಭಾರತದ ಹೆಗ್ಗಳಿಕೆಯಾಗಿದೆ ಎಂದರು.
ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತವು ಬಾಹ್ಯಾಕಾಶ (ಚಂದ್ರಯಾನ, ಮಂಗಳಯಾನ) ಮಾಹಿತಿ ತಂತ್ರಜ್ಞಾನ ರಕ್ಷಣಾ ಸಂಶೋಧನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ. ಇಸ್ರೋ ಕಡಿಮೆ ವೆಚ್ಚದ ತಂತ್ರಜ್ಞಾನದ ಮೂಲಕ ವಿಶ್ವದಲ್ಲೇ ಐದನೇ ಬಾಹ್ಯಾಕಾಶ ಶಕ್ತಿಯಾಗಿ ಗುರುತಿಸಿಕೊಂಡಿದೆ. ಮಂಗಳಯಾನದ ಮೊದಲ ಪ್ರಯತ್ನದಲ್ಲಿ ಭಾರತಕ್ಕೆ ಭವ್ಯ ಯಶಸ್ಸು ದೊರೆತಿರುವುದು ಬಾರತೀಯರೆಲ್ಲರೂ ಹೆಮ್ಮೆ ಪಡುವ ಸಂಗತಿಯಾಗಿದೆ. ಇದರಿಂದಾಗಿ ಜಗತ್ತು ಭಾರತದತ್ತ ನೋಡುವಂತಾಗಿದೆ ಎಂದರು.
ರಕ್ಷಣಾ ವಿಷಯವನ್ನು ಹೊರತುಪಡಿಸಿ, ಇತರೆ ಅಭಿವೃದ್ಧಿ ಪರ ವಿಷಯಗಳಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆಯಾಗುತ್ತಿರುವುದು ಭಾರತದಲ್ಲಿ ಮಾತ್ರವಾಗಿದೆ. ಸಿಂಧೂರದಲ್ಲಿ ಭಾರತ ಬಾಹ್ಯಾಕಾಶ ತಂತ್ರಜ್ಞಾನ ಬಳಕೆಯಾಗಿದೆ. ಭಾರತ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಕ್ಷಮತೆ ಸಾಧಿಸಿದೆ. ಅಮೇರಿಕಾದಂತಹ ರಾಷ್ಟ್ರಗಳು ಭಾರತದ ಸಾಧನೆಯನ್ನು ಪ್ರಶಂಸಿಸಿವೆ ಎಂದರು.
ನೆಲ, ಜಲ ಮತ್ತು ಆಹಾರ ವಿಷಯದ ವಿಷಯಗಳಲ್ಲಿ ಸ್ವಾಮ್ಯತ್ವ ಸಾಧನೆಗೆ ಮುಂದಾಗಿದ್ದಾರೆ. ಸ್ವಾಮ್ಯತ್ವ ಬೆಳೆಸಿಕೊಂಡವರು ಮಾತ್ರ ವ್ಯವಸ್ಥೆಯಲ್ಲಿ ಅಸ್ತಿತ್ವ ಕಂಡುಕೊಳ್ಳಲು ಸಾಧ್ಯ ಎಂದವರು ನುಡಿದರು.
ಭಾರತದಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ಅಳವಡಿಸಿಕೊಳ್ಳುವಲ್ಲಿ ಹೊಸಹೆಜ್ಜೆ ಇರಿಸಿದೆ. ತಂತ್ರಜ್ಞಾನ ನಾವು ತೆಗೆದುಕೊಳ್ಳುವ ಔಷಧ, ನಾವು ತಿನ್ನುವ ಆಹಾರ, ನಾವು ದರಿಸುವ ಬಟ್ಟೆ ಮತ್ತು ಸಂವಹನ ಇವೆಲ್ಲವೂ ವಿಜ್ಞಾನದ ಬಳಕೆಯ ಮೂಲಕ ಸಾಧ್ಯವಾಗಿದೆ. ಜಗತ್ತನ್ನು ರೂಪಿಸುವ, ಪ್ರಗತಿ ಮತ್ತು ನಾವೀನ್ಯತೆಯ ಹಿಂದಿನ ಪ್ರೇರಕ ಶಕ್ತಿ ವಿಜ್ಞಾನವಾಗಿದೆ ಎಂದರು.
ಅಮೇರಿಕಾ ದೇಶವು ಉಡಾಯಿಸಿದ ಉಪಗ್ರಹವನ್ನು ಬಳಸಿಕೊಂಡು ಬಾಹ್ಯಾಕಾಶ ತಂತ್ರಜ್ಞಾನ ದೇಶಕ್ಕೆ ಸಂಪರ್ಕ ಸಾಧನವಾಗಿ ಬಳಸುವುದು ಸಾಧ್ಯ ಎಂದು 1975ರಲ್ಲಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಒಂದು ಕಾಲದಲ್ಲಿ ದೇಶದ ಜನರಿಗೆ ಆಹಾರ, ಶಿಕ್ಷಣ ಮತ್ತು ವಸತಿ ವ್ಯವಸ್ಥೆ ಕಲ್ಪಿಸುವುದು ದುಸ್ತರ ಎನ್ನುವಂತ ಕಾಲವಿತ್ತು. ಅಂತಹ ಕಾಲದಲ್ಲಿ ನೆರೆಯ ರಾಷ್ಟ್ರಗಳು ಬಾಹ್ಯಾಕಾಶ ತಲುಪುವ ಪ್ರಯತ್ನದಲ್ಲಿದ್ದವು ಎಂದರು.
ಬಾಹ್ಯಾಕಾಶ ತಂತ್ರಜ್ಞಾನದ ಬಳಕೆಯಿಂದಾಗಿ ದೇಶಕ್ಕೆ 10-15000ಕೋಟಿ ರೂ.ಗಳ ಉಳಿತಾಯವಾಗಿದೆ. ಸಮುದ್ರದಲ್ಲಿ ಮೀನುಗಾರರಿಗೆ ಹವಾಮಾನ, ನೀರಿನ ಸಮಸ್ಯೆ, ಅಲೆಗಳು, ಜಲಚರಗಳು, ಸಮಸ್ಯೆ-ಸವಾಲುಗಳು ಮತ್ತಿತರ ಎಚ್ಚರಿಕೆಯ ಸಂದೇಶಗಳನ್ನು ಸ್ಥಳೀಯ ಭಾಷೆಯಲ್ಲಿ ದೊರೆತಿದೆ ಎಂದ ಅವರು, ವಿಜ್ಞಾನಿ ತಂತ್ರಜ್ಞಾನಿಗಳಿಗೆ ಕ್ಷಮತೆ ಹೆಚ್ಚಿಸಬೇಕು. ಇದರಿಂದಾಗಿ ಅವರು ಸವಾಲಿನ ಕಾರ್ಯಕ್ಕೆ ಮುಂದಾಗುವಂತಾಗಬೇಕೆಂದವರು ನುಡಿದರು.
ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ಮಾತನಾಡಿ, ಜಿಲ್ಲೆಯ ನಗರ ಮತ್ತು ಗ್ರಾಮೀಣ ಜನರಲ್ಲಿನ ಮೌಢ್ಯ ಮತ್ತು ಕಂದಾಚಾರಗಳನ್ನು, ಅವೈಜ್ಞಾನಿಕ ವಿಷಯಗಳನ್ನು ಜನಮಾನಸದಿಂದ ಹೊರಹಾಕುವುದು, ಬಾಲ್ಯವಿವಾಹದಂತಹ ಅನಿಷ್ಟಗಳನ್ನು ಹೊರದೂಡಿ, ವೈಜ್ಞಾನಿಕವಾದ, ತಾರ್ಕಿಕವಾಗಿ ಖಚಿತವಾದ ವಿಷಯಗಳನ್ನು ಜನರಿಗೆ ತಲುಪಿಸುವುದು ಅರಿವು ಕೇಂದ್ರಗಳು ಮತ್ತು ಶಾಲೆಗಳಿಂದ ಸಾಧ್ಯ ಎಂಬುದನ್ನರಿತು ದೇಶ, ರಾಜ್ಯದಲ್ಲಿಯೇ ಮೊದಲ ಬಾರಿಗೆ ನಾನು ವಿಜ್ಞಾನಿ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ನಾಲ್ಕು ದಿನಗಳ ಅವಧಿಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಆಹಾರ ಮತ್ತು ಪೌಷ್ಠಿಕತೆ, ಪರಿಸರದಲ್ಲಿ ಗುರುತಿಸಲಾಗುತ್ತಿರುವ ವಿಜ್ಞಾನ ವಿಷಯಗಳು, ದೂರದರ್ಶಕ ತಯಾರಿಕೆ ಮತ್ತು ಬಾಹ್ಯಾಕಾಶಗಳ ವೀಕ್ಷಣೆ ಮತ್ತು ಮಕ್ಕಳು ಮತ್ತು ಸಾರ್ವಜನಿಕರಿಗೆ ವಿಜ್ಞಾನ ವಿಷಯಗಳಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ ಕೆ.ಆರ್., ಸನ್ನಿಧಿ ಚರ್ಚ್ ಇನ್ಸ್ಟಿಟ್ಯೂಟಿನ ಮುಖ್ಯಸ್ಥ ಫಾ.ಪಿಂಟೋ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...