Saturday, May 2, 2026
Saturday, May 2, 2026

DVS College of Arts, Science and Commerce ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ಸಿದ್ಧಪಡಿಸಿ: ಡಾ. ಎಂ.ವೆಂಕಟೇಶ್

Date:

DVS College of Arts, Science and Commerce ಆಧುನಿಕ ಜಗತ್ತಿನ ಸಾಮಾಜಿಕ ಜಾಲತಾಣಗಳ ಕ್ರಾಂತಿಕಾರಕ ಬದಲಾವಣೆಗಳನ್ನು ವಿದ್ಯಾರ್ಥಿಗಳು ಕಾಲಕಾಲಕ್ಕೆ ಅರಿತುಕೊಳ್ಳಬೇಕು ಎಂದು ಶಿವಮೊಗ್ಗದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್ ಹೇಳಿದರು.
ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಮತ್ತು ಡಾ. ಜಿ.ಎ.ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಂಬುದು ಎಲ್ಲಾ ಕಡೆ ಆವರಿಸಿಕೊಂಡು ಜೀವ ಜಗತ್ತಿಗೆ ಅತಿ ವೇಗವನ್ನು ನೀಡುತ್ತಿದೆ ಎಂದು ತಿಳಿಸಿದರು.
ಕಾಲದ ವೇಗಕ್ಕೆ ತಕ್ಕಂತೆ ಬಿಎಡ್ ವಿದ್ಯಾರ್ಥಿಗಳು ಸಾಗಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಜಗತ್ತಿಗೆ ಸಿಕ್ಕಂತೆ ಸಿದ್ಧಪಡಿಸಬೇಕು. ಯಾವುದೇ ಭೇದವಿಲ್ಲದೆ ಜ್ಞಾನದ ದಾಸೋಹವನ್ನು ನಮ್ಮ ಶಿಕ್ಷಕ ಸಮುದಾಯ ಎಲ್ಲರಿಗೂ ನೀಡಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಭವಿಷ್ಯದ ದೃಷ್ಟಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯ ಸಿದ್ಧತೆ ನಡೆಸಬೇಕು. ಪದವಿ ಶಿಕ್ಷಣದ ಜತೆಯಲ್ಲಿ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ಹೆಚ್ಚಿನ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಮುಂದಿನ ಜನಾಂಗವನ್ನು ಮೌಲ್ಯಯುತವಾಗಿ ಸಿದ್ಧಗೊಳಿಸಬೇಕು ಎಂದು ತಿಳಿಸಿದರು.
DVS College of Arts, Science and Commerce ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ಎಚ್ ಎಂ ಶಿವಕುಮಾರ್ ಮಾತನಾಡಿ, ಅವರು ಇಂದು ಜಗತ್ತಿನಲ್ಲಿ ಬದಲಾವಣೆಗಳ ಗಾಳಿ ಬೀಸುತ್ತಿತ್ತು ಅದಕ್ಕೆ ತಕ್ಕ ಹಾಗೆ ನಮ್ಮ ಶಿಕ್ಷಕರಿಂದ ಮತ್ತು ವಿದ್ಯಾರ್ಥಿಗಳು ತಯಾರಾಗಬೇಕು ಎಂದು ಅಭಿಪ್ರಾಯಪಟ್ಟರು.
ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಎಚ್.ಎಂ.ರವಿಕುಮಾರ್, ಕೋಶಾಧ್ಯಕ್ಷ ಕೆ.ವೆಂಕಟೇಶ್, ಸಹ ಕಾರ್ಯದರ್ಶಿ ಎಂ.ಆರ್.ಸತ್ಯನಾರಾಯಣ, ಜಿ.ಎಸ್.ಪ್ರಕಾಶ್, ಡಾ. ಜಿ.ಎ.ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಶಿಲ್ಪಾ ವಿ.ಎನ್. ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Agricultural University ಕೃಷಿ ಪದವಿಗೆ ಪ್ರಾಯೋಗಿಕ ಪರೀಕ್ಷೆಯ ಅವಧಿ ವಿಸ್ತರಣೆ

Agricultural University ರೈತರ ಮಕ್ಕಳಿಗಾಗಿ ಮೀಸಲಿರುವ ಕೃಷಿ ಪದವಿ ಸೀಟುಗಳಿಗಾಗಿ ಪ್ರವೇಶ...