Sunday, August 2, 2026
Sunday, August 2, 2026

S. N. Channabasappa ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು : ಎಸ್ ಎನ್ ಚನ್ನಬಸಪ್ಪ

Date:

S. N. Channabasappa ಮಾನವರೆಲ್ಲರೂ ಒಂದೇ. ಮನುಕುಲದ ಉದ್ದಾರವೇ ಶ್ರೇಷ್ಟ ಎಂದು ಕೈವಾರ ತಾತಯ್ಯನವರು ನಂಬಿದ್ದು, ಮನುಕುಲದ ಉದ್ದಾರದ ಕುರಿತು ಸಾಕಷ್ಟು ಕೀರ್ತನೆಗಳನ್ನು ರಚಿಸಿ ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಸ್ಮರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬಲಿಜ ಸೇವಾ ಸಂಘ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾತಯ್ಯನವರು ದೇವರ ವಿಶೇಷ ಸೃಷ್ಟಿ. ಅವರು ಭಗವಂತನ ಸ್ವರೂಪ. ಪ್ರತಿಯೊಬ್ಬ ಮನುಷ್ಯ ಸಂಸ್ಕೃತಿಯನ್ನು ಅರಿತಿರಬೇಕು. ಗ್ರಾಮದ ಲೆಕ್ಕಿಗ ಭ್ರಷ್ಟನಾಗಿರಬಾರದು ಎಂದು ಅಂದೇ ಹೇಳಿದ್ದರು. ಬದುಕು ಹೇಗಿರಬೇಕು ಎಂದು ತಿಳಿಸಿಕೊಟ್ಟ ಸಾಂಸ್ಕೃ್ಕತಿಕ ಹರಿಕಾರರಾದ ಇವರು ಜಾತಿ ವ್ಯವಸ್ಥೆಯನ್ನು ತೀವ್ರವಾಗಿ ವಿರೋಧಿಸುತ್ತಿದ್ದರು. ಮನುಕುಲದ ಉದ್ದಾರವೇ ಶ್ರೇಷ್ಟವೆಂದು ನಂಬಿದ್ದರು. ಸರಳ ಕನ್ನಡದಲ್ಲಿ ತತ್ವಪದಗಳು ಮತ್ತು ಕಾಲಜ್ಞಾನ ವನ್ನು ರಚಿಸಿ, ಭವಿಷ್ಯದ ಘಟನೆಗಳನ್ನು ಮುನ್ನರಿತಿದ್ದರು. ಇವರ ಕೀರ್ತನೆಗಳು ಭಕ್ತಿ, ಯೋಗ ಮತ್ತು ವೇದಾಂತದ ಸಾರವನ್ನು ಒಳಗೊಂಡಿವೆ ಎಂದರು.
ಮನುಕುಲದ ಏಳಿಗೆಗೋಸ್ಕರ ಚಿಂತಿಸಿದ ಇಂತಹ ಮಹಾನ್ ದಾರ್ಶನಿಕರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸುವ ಕೆಲಸ ಆಗಬಾರದು. ಇಡೀ ಸಮಾಜಕ್ಕೆ ಇವರು ಸೇರಿದವರು. ಇವರು ಹಾಕಿಕೊಟ್ಟ ದಾರಿಯಲ್ಲಿ ನಾವು ಸಾಗಬೇಕು. ಬಲಿಜ ಸಮಾಜ ಸ್ವಾವಲಂಬಿ ಸಮಾಜವಾಗಿದ್ದು, ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
S. N. Channabasappa ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ ಮಾತನಾಡಿ, ಇಡೀ ಸಮಾಜಕ್ಕೆ ಹಾಗೂ ಮುಂದಿನ ಪೀಳಿಗೆಗೆ ಇಂತಹ ಮಹಾನ್ ಸಾಧಕರ ಸಂದೇಶಗಳು, ತತ್ವ, ಆದರ್ಶಗಳನ್ನು ತಲುಪಿಸಬೇಕೆಂಬ ಉದ್ದೇಶದಿಂದ ಸರ್ಕಾರವು ಜಯಂತಿಗಳನ್ನು ಆಚರಿಸುತ್ತಿದೆ. ಕೈವಾರ ತಾತಯ್ಯನವರು ಎಲ್ಲ ಹೆಣ್ಣುಮಕ್ಕಳನ್ನು ತಾಯಿ ಸಮಾನ ಕಾಣುತ್ತಿದ್ದು, ಬಳೆ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಾ, ಸಮಾಜದಲ್ಲಿ ಸಾಮರಸ್ಯ ಮತ್ತು ಸಮಾನತೆ ಸಾರುವ ಕೆಲಸ ಮಾಡುತ್ತಾರೆ. ಕೀರ್ತನೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಪ್ರಯತ್ನ ಮಾಡುತ್ತಾರೆ. ತಾತಯ್ಯನಂತಹ ಮಹಾನ್ ವ್ಯಕ್ತಿಗಳನ್ನು ನಾವು ಸದಾ ಅನುಸರಿಸಬೇಕು ಎಂದ ಅವರು ಬಲಿಜ ಸಮಾಜವು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆಯಬೇಕು ಎಂದರು.
ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಧ್ಯಾಪಕರಾದ ಡಾ. ಛಾಯಾಕುಮಾರಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಸಮಾಜ ಸುಧಾರಕರಾದ ತಾತಯ್ಯನವರು ದೈವೀ ಪವಾಡದಿಂದ ಮುದ್ದಮ್ಮ ಮತ್ತು ಕೊಂಡಪ್ಪ ದಂಪತಿಗೆ ಜನಿಸುತ್ತಾರೆ. ಇವರನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಅವರೊಂದು ಅಗಾಧವಾದ ಸಮುದ್ರ.
ಪ್ರೌಢ ವಯಸ್ಕರಾದಾಗ ಸೋದರತ್ತೆಯ ಮಗಳು ಮುನಿಯಮ್ಮ (ಲಕ್ಷ್ಮಮ್ಮ) ಳೊಂದಿಗೆ ವಿವಾಹವಾಗಿ ಮೂವರು ಮಕ್ಕಳ ತಂದೆಯಾದರು. ಜೀವನ ನಿರ್ವಹಣೆಗಾಗಿ ಬಳೆ ಮಾರುವ ವೃತ್ತಿ ಕೈಗೊಂಡರು. ಹಣದ ಬೆನ್ನತ್ತದೆ, ಶುದ್ಧ ಭಾವದಿಂದ ಬಳೆ ಮಾರುತ್ತಿದ್ದ ಇವರಿಗೂ ಪತ್ನಿಗೂ ವಿರಸ ಉಂಟಾಗುತ್ತದೆ.
ಒಮ್ಮೆ ಬಳೆ ಮಾರಲು ಹೋದಾಗ ಎದುರಾದ ಪರದೇಶಿ ಸ್ವಾಮಿಗಳಿಂದ ಓಂ ನಮೋ ನಾರಾಯಣಾಯ ಎಂಬ ಮಂತ್ರೋಪದೇಶ ಪಡೆಯುತ್ತಾರೆ. ನಂತರ ಬೆಣಚುಕಲ್ಲೊಂದನ್ನು ಬಾಯಲ್ಲಿಟ್ಟುಕೊಂಡು ಕೈವಾರದ ನರಸಿಂಹ ಗುಹೆಯಲ್ಲಿ ಮೂರು ವರ್ಷ ಕಠಿಣ ತಪಸ್ಸು ಮಾಡಿ ದೈವ ಸಾಕ್ಷಾತ್ಕಾರ ಪಡೆಯುತ್ತಾರೆ. ಆಗ ಬಾಯಲ್ಲಿದ್ದ ಕಲ್ಲು ಸಕ್ಕರೆಯಾಗಿ ಬದಲಾಗುತ್ತದೆ. ನಂತರ ಯೋಗಿ ನಾರೇಯಣ ಎಂದು ಪ್ರಸಿದ್ದರಾದ ಅವರು ಮುಂದೆ ಪವಾಡ ಪುರುಷರಾಗುತ್ತಾರೆ. ಮನುಷ್ಯನ ಅಹಂ ಎಂಬ ಅಂಧಕಾರ ಸಕ್ಕರೆಯಂತೆ ಕರಗಬೇಕು. ಜ್ಞಾನ ಜ್ಯೋತಿ ಬೆಳಗಬೇಕು ಎಂದು ಪ್ರತಿಪಾದಿಸಿದ ಅವರು ಜ್ಞಾನ, ದಯೆ, ಸಹಬಾಳ್ವೆ, ಸಂಸ್ಕಾರ ಕೊಡುವಂತಹದ್ದೇ ನಿಜವಾದ ಶಿಕ್ಷಣ ಎಂದು ಹೇಳಿದ್ದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳನ್ನು ಇದೇ ವೇಳೆ ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾದ ಎಸ್.ಎನ್.ವೆಂಕಟೇಶ್, ಕಾರ್ಯದರ್ಶಿಗಳಾದ ಡಾ.ಬಿ.ಆರ್.ಶಿವಕುಮಾರ್ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಸಮಾಜದ ಮುಖಂಡರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...