Saturday, March 7, 2026
Saturday, March 7, 2026

DC Shivamogga ಕ್ರೀಡೆಯಲ್ಲಿ ಸ್ಪರ್ಧಾಮನೋಭಾವ ಮುಖ್ಯ, ಸೋಲು-ಗೆಲುವು ಅಲ್ಲ : ಪ್ರಭುಲಿಂಗ ಕವಳಿಕಟ್ಟಿ

Date:

DC Shivamogga ಸೋಲು-ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಭಾಗವಹಿಸುವಿಕೆ ಮತ್ತು ಸ್ಪರ್ಧಾ ಮನೋಭಾವ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ರಾಜ್ಯ ಸರ್ಕಾರಿ ನೌಕರರ ಸಂಘವು ಜೆ.ಎನ್.ಎನ್.ಸಿ.ಇ. ತಾಂತ್ರಿಕ ಮಹಾವಿದ್ಯಾಲಯದ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಇಲಾಖೆಗಳ ನಡುವೆ ನಡುವಿನ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಟೆನ್ನಿಸ್‌ಬಾಲ್‌ ಕ್ರಿಕೇಟ್‌ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಎಲ್ಲರಲ್ಲೂ ಸುಪ್ತವಾಗಿರುವ ಪ್ರತಿಭೆಯ ಅನಾವರಣಕ್ಕೆ ಅವಕಾಶ ಇದಾಗಲಿದೆ ಎಂದ ಅವರು, ದಿನನಿತ್ಯ ತಮ್ಮ ದೈನಂದಿನ ಒತ್ತಡದ ಕೆಲಸ-ಕಾರ್ಯಗಳ ಮದ್ಯೆ ದಿನಕಳೆಯುವ ನೌಕರರು ಎರಡು ದಿನಗಳ ಕಾಲವಾದರೂ ದೈನಂದಿನ ಒತ್ತಡದಿಂದ ಹೊರಬರಬಹುದಾಗಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ಘಟಕವು ಶಿವಮೊಗ್ಗದಲ್ಲಿ ಸದಾ ಕ್ರಿಯಾಶೀಲವಾಗಿರುವುದು ಸಂಘದ ಅ‍ಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಕಾಲಿಕ ಚಿಂತನೆ, ಪಾಲ್ಗೊಳ್ಳುವಿಕೆ, ಕಾರ್ಯಕ್ರಮಗಳ ಆಯೋಜನೆ ಉತ್ಕೃಷ್ಟವಾದುದಾಗಿದೆ. ಸಂಘದ ಪದಾಧಿಕಾರಿಗಳೊಂದಿಗೆ ಎಲ್ಲಾ ಇಲಾಖಾ ನೌಕರರು ಪಾಲ್ಗೊಳ್ಳುತ್ತಿರುವುದು ಸಂಭ್ರಮದ ವಾತಾವರಣವನ್ನು ನಿರ್ಮಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವ ಎಲ್ಲರೂ ಸ್ಪರ್ಧಾ ಮನೋಭಾವದಿಂದ ಕ್ರೀಡೆಯಲ್ಲಿ ಪಾಲ್ಗೊಂಡು ಕ್ರೀಡೆಯನ್ನು ಸಂಭ್ರಮಿಸುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್‌ಅವರು ಮಾತನಾಡಿ, ವಿವಿಧ ಇಲಾಖಾ ಅಧಿಕಾರಿ-ಸಿಬ್ಬಂಧಿಗಳ ನಡುವೆ ಸೌಹಾರ್ಧಯುತವಾಗಿ ಮತ್ತು ಸ್ನೇಹಪೂರ್ವಕವಾಗಿ ಕ್ರಿಕೇಟ್‌ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದು ಇಲಾಖೆ-ಇಲಾಖೆಗಳ ಮತ್ತು ಅಧಿಕಾರಿಗಳ ನಡುವೆ ಸ್ನೇಹ ಸಂಬಂಧಗಳು ಏರ್ಪಟ್ಟು ತಮ್ಮ ಕಾರ್ಯಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುವಲ್ಲಿ ಈ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದರು.
ಕ್ರೀಡಾಕೂಟವು ಸ್ಪರ್ಧಾತ್ಮಕವಾಗಿರುವಂತೆ ಸಂತೋಷದಾಯಕವೂ ಆಗಿರಲಿ. ಎಲ್ಲಾ ನೌಕರರು ಸಕ್ರಿಯವಾಗಿ ಆಟದಲ್ಲಿ ಪಾಲ್ಗೊಳ್ಳುವಂತೆ ಕ್ರೀಡೆ ಆಯೋಜನೆ ಮಾಡಿರುವುದು ನೌಕರರ ನಡುವೆ ಉತ್ತಮ ಬಾಂಧವ್ಯಕ್ಕೆ ಕಾರಣವಾಗಲಿದೆ ಮಾತ್ರವಲ್ಲ ಪರಸ್ಪರರಲ್ಲಿ ಸೌಹಾರ್ಧ ವಾತಾವರಣ ನಿರ್ಮಾಣಗೊಳ್ಳಲಿದೆ. ಇದು ತಮ್ಮ ಕಾರ್ಯಕ್ಷೇತ್ರದಲ್ಲಿ ಎಂದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಇಂತಹ ವಿಶೇಷ ಕಾರ್ಯಕ್ರಮಗಳು ರೂಪಿಸಿ ಅನುಷ್ಠಾನಕ್ಕೆ ತರುವಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಶಿವಮೊಗ್ಗ ಜಿಲ್ಲಾ ಘಟಕ ಮೊದಲ ಪಂಕ್ತಿಯಲ್ಲಿದೆ ಎಂದ ಅವರು ದೇಶದಲ್ಲಿಯೂ ಅಗ್ರಪಂಕ್ತಿಯಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದರು.
DC Shivamogga ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆ ಮತ್ತು ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನೌಕರರು ಮಾನಸಿಕ ಒತ್ತಡದಿಂದ ಹೊರಬರಲು ಸಹಕಾರಿಯಾಗಿದೆ. ಆಗಾಗ್ಗೆ ಸವಾಲು-ಸಮಸ್ಯಾತ್ಮಕ ಸಂದರ್ಭಗಳನ್ನು ಎದುರಿಸಿ, ಖಾಲಿ ಹುದ್ದೆಗಳು, ನೌಕರ-ಸಿಬ್ಬಂಧಿಗಳ ಕೊರತೆಯ ನಡುವೆಯೂ ಸಕಾಲದಲ್ಲಿ ಕಾರ್ಯನಿರ್ವಹಿಸುಲ್ಲಿ ನೌಕರರು ಸಮರ್ಥರಾಗಿದ್ದಾರೆ. ಎಲ್ಲಾ ನೌಕರರು ತಮ್ಮ ಕಾರ್ಯಕ್ಷೇತ್ರದಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಸರ್ಕಾರಕ್ಕೆ ಉತ್ತಮ ಹೆಸರು ಬರಲಿದೆ ಎಂದರು.
ಈ ಕ್ರೀಡಾಕೂಟದಿಂದಾಗಿ ನೌಕರರ ನಡುವೆ ಸಮನ್ವಯತೆ, ಸೌಹಾರ್ಧತೆ ಮತ್ತು ಸಹಭಾಳ್ವೆ ಮೂಡಲಿದೆ ಅದರ ಮೂಲಕ ನಾವೆಲ್ಲರೂ ಏಕತೆಯಿಂದ ಇರಲು ಸಾಧ್ಯವಾಗಿದೆ ಎಂದ ಅವರು, ಎಲ್ಲಾ ನೌಕರರು ಜಿಲ್ಲಾಡಳಿತದೊಂದಿಗೆ ಸೌಹಾರ್ಧಯುತವಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಮನವಿ ಮಾಡಿದರು.
ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ರಾಜ್ಯದ ಅಲ್ಲಲ್ಲಿ ಸಾರ್ವಜನಿಕರು ಹಲ್ಲೆ ಮಾಡಿರುವ ಅಹಿತಕರ ಘಟನೆಗಳು ಕೇಳಿ ಬರುತ್ತಿವೆ. ಇದನ್ನು ನಿಯಂತ್ರಿಸುವಲ್ಲಿ ಕಾರ್ಯನಿರತ ಅಧಿಕಾರಿ-ಸಿಬ್ಬಂಧಿಗಳ ಮೇಲೆ ಹಲ್ಲೆಗೆ ಮುಂದಾಗುವುದು, ಅವಾಚ್ಯ ಶಬ್ಧಗಳಿಂದ ನಿಂದಿಸುವುದು, ಇತ್ಯಾದಿಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ಹೊಸದಾದ ಕಾಯ್ದೆಯನ್ನು ಮುಂದಿನ ಕ್ಯಾಬಿನೆಟ್‌ನಲ್ಲಿ ಜಾರಿಗೊಳಿಸಲಿದೆ. ಅದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಾಗೂ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಇದರಿಂದಾಗಿ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸೌಹಾರ್ಧಯುತವಾಗಿ ವ್ಯವಹರಿಸಲಿದ್ದಾರೆ ಎಂದರು.
ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿವಿಧ ಇಲಾಖೆಗಳ 32 ಟೀಮ್‌ಗಳ ಸದಸ್ಯರು ಸಕ್ರಿಯವಾಗಿ ಭಾಗವಹಿಸಿರುವುದು ಸಂತಸವೆನಿಸಿದೆ. 2ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಎಲ್ಲರೂ ಸೌಹಾರ್ಧಯುತವಾಗಿ, ಶಾಂತಿಯುತವಾಗಿ ವರ್ತಿಸಬೇಕು. ಅಲ್ಲದೇ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂಧಿಗಳು ಮಾತ್ರ ಆಟದಲ್ಲಿ ಪಾಲ್ಗೊಳ್ಳಬೇಕು. ವಿನಃ ಇತರೆಯವರು ಭಾಗವಹಿಸಿ, ಅನಗತ್ಯ ಚರ್ಚೆಗೆ ಅವಕಾಶ ಮಾಡುವಂತಾಗಬಾರದು ಎಂದರು.
ಕಾರ್ಯಕ್ರಮದಲ್ಲಿ ಶಿವಪ್ರಕಾಶ್‌, ಯುವಕುಮಾರ್‌, ಉಪವಿಭಾಗಾಧಿಕಾರಿ ಸತ್ಯನಾರಾಯಣ್‌, ಆರ್.ಪಾಪಣ್ಣ, ಕೊಟ್ರೇಶ್‌, ರಂಗನಾಥ್‌, ಡಾ|| ಹಿರೇಮಠ್, ರವಿ, ಸುಮತಿ, ದಿನೇಶ್‌ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura Horticulture Department ಉಚಿತ ತರಕಾರಿ ಬೀಜಗಳನ್ನು ಪಡೆಯಲು ಅರ್ಜಿ ಆಹ್ವಾನ

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ...

Information and Public Relations Department ಭೀಮ ಗಾಯನದ ಮೂಲಕ ಸಮಾಜವನ್ನು ಎಚ್ಚರಿಸುವ ಕೆಲಸ ಪರಿಣಾಮಕಾರಿ : ಚಂದ್ರಭೂಪಾಲ

Information and Public Relations Department ಅಂಬೇಡ್ಕರ್, ಬುದ್ದ ಮತ್ತು ಬಸವಣ್ಣನಂತಹವರು...

ಪತ್ರಿಕಾ ವಿತರಕ ಕಿರಣ್ ನಿಧನ

ಶಿವಮೊಗ್ಗ ನಗರದ ಹೊಸಮನೆ ಬಡಾವಣೆ ನಿವಾಸಿ ಪತ್ರಿಕಾ ವಿತರಕ ಕಿರಣ್(೩೫)...