B. R. Ambedkar ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಏಪ್ರಿಲ್ 5 ರಂದು ಹಾಗೂ ಏಪ್ರಿಲ್ 14 ರಂದು ಕ್ರಮವಾಗಿ ರಾಜ್ಯಾದ್ಯಾಂತ ಡಾ. ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ 2026 ನೇ ಸಾಲಿಗೆ ಸದರಿ ಮಹನೀಯರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಯಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೊನೆಯ ದಿನಾಂಕ: 10-03-2026 ಕ್ಕೆ ನಿಗಧಿಪಡಿಸಲಾಗಿರುತ್ತದೆ.
B. R. Ambedkar ಸದರಿ ಅವಧಿಯನ್ನು ದಿನಾಂಕ: 15-03-2026 ರವರೆಗೆ ವಿಸ್ತರಿಸಲಾಗಿರುತ್ತದೆ.
ಆದ್ದರಿಂದ ಆಸಕ್ತರು ದಿನಾಂಕ: 15-03-2026 ರೊಳಗೆ ಕೇಂದ್ರ ಕಛೇರಿಗೆ ಅಥವಾ ಸಂಬಂಧಪಟ್ಟ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಮಾಜ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಅರ್ಜಿಗಳನ್ನು ಸಲ್ಲಿಸಲು ಕೋರಿದೆ.
