Sunday, August 9, 2026
Sunday, August 9, 2026

L. B College ಎಲ್. ಬಿ ಕಾಲೇಜಿನಲ್ಲಿ ಕೃತಕ ಬುದ್ದಿಮತ್ತೆ ಕುರಿತು ಕಾರ್ಯಗಾರ

Date:

L. B College ಸಾಗರದ ಎಲ್. ಬಿ. ಕಾಲೇಜಿನಲ್ಲಿ ಕೃತಕ ಬುದ್ದಿಮತ್ತೆ (ಎ ಐ) ಕುರಿತ 2 ದಿನಗಳ ಕಾರ್ಯಗಾರವು ಸೋಮವಾರ ಆರಂಭವಾಯಿತು. ಕಾರ್ಯಗಾರವನ್ನು ಉದ್ಘಾಟಿಸಿದ ಎಂ. ಡಿ ಎಫ್ ಅಧ್ಯಕ್ಷರಾದ ಬಿ. ಆರ್. ಜಯಂತ್ ರವರು ಎ ಐ ಜ್ಞಾನ ಎಲ್ಲರಿಗೂ ಅನಿವಾರ್ಯವಾಗಿದ್ದು ವಿದ್ಯಾರ್ಥಿಗಳು ಕಾರ್ಯಾಗಾರದ ಪೂರ್ಣ ಪ್ರಯೋಜನ ಪಡೆಯುವಂತೆ ತಿಳಿಸಿದರು. ನಮ್ಮ ಕಾಲೇಜಿನಲ್ಲಿ ಎ ಐ ಕೋರ್ಸ್ ಆರಂಭಿಸುವ ಯೋಚನೆಯಿದೆ ಎಂದು ಹೇಳಿದರು. ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಲಕ್ಷ್ಮೀಶ ಎ. ಎಸ್ ಮಾತನಾಡುವ ಸಾಧನವಾಗಿದ್ದ ಮೊಬೈಲ್ ಇಂದು ಸಂದೇಶಗಳನ್ನು ಕಳುಹಿಸಲು, ಹಣಕಾಸಿನ ವ್ಯವಹಾರ ನಡೆಸಲು ಮುಖ ನೋಡಿ ಮಾತನಾಡಲು, ಕನ್ನಡಿಯಾಗಿ, ಲೆಕ್ಕ ಮಾಡುವ ಕ್ಯಾಲುಕ್ಯೂಲೇಟರ್ ಆಗಿ, ಮೇಲ್ ಕಳುಹಿಸಲು ಹೀಗೆ ವಿವಿಧ ಉದ್ದೇಶಗಳಿಗೆ ಬಳಕೆಯಾಗುತ್ತಿದೆ. ಇವೆಲ್ಲವೂ ಸಾಧ್ಯವಾಗಿದ್ದು ಮೊಬೈಲ್ ನ್ನು ಹೇಗೆಲ್ಲಾ ಬಳಸಬಹುದು ಎಂಬ ನಿರಂತರ ಅಧ್ಯಯನ ಮತ್ತು ಸಂಶೋಧನೆಯಿಂದ ಹೀಗೆ ಎ ಐ ತಂತ್ರಜ್ಞಾನವನ್ನು ಬಳಸಬಹುದಾದ ಕ್ಷೇತ್ರಗಳ ಬಗ್ಗೆ ಅಧ್ಯಯನ ಮತ್ತು ಸಂಶೋಧನೆಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಎ ಐ ಕುರಿತು ತರಬೇತಿ ನೀಡಲು ಬೆಂಗಳೂರಿನ ಅಪ್ ಫ್ರಂಟ್ ಸಂಸ್ಥೆಯ ಸಹಯೋಗದೊಂದಿಗೆ 2 ದಿನಗಳ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಎಂ. ಡಿ ಎಫ್ ಪ್ರಧಾನ ಕಾರ್ಯದರ್ಶಿ ಡಾ. ಶಿವಕುಮಾರ್, ಜಂಟಿ ಕಾರ್ಯದರ್ಶಿ ಎಂ. ಆರ್ ಸತ್ಯನಾರಾಯಣ ಉಪಸ್ಥಿತರಿದ್ದರು. ಕಾಲೇಜಿನ ಐ ಕ್ಯೂ ಎ ಸಿ ಸಂಚಾಲಕರಾದ ನಾಗೇಶ್ ಚೌಹಾನ್ ಎಲ್ಲರನ್ನು ವಂದಿಸಿದರು. ಮೊಬೈಲ್ ನಲ್ಲಿಯೇ ಪ್ರಾಯೋಗಿಕವಾಗಿ ಎ ಐ ಬಳಸುವ ತರಬೇತಿಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...