Thursday, April 30, 2026
Thursday, April 30, 2026

ಬಿಜೆಪಿ ಯುವ ಮೋರ್ಚಾ ಜಿಲ್ಲಾ ತಂಡದಿಂದ ಮನವಿ

Date:

ಶಿವಮೊಗ್ಗ ನಗರದ ಗೋಪೀ ಸರ್ಕಲ್‌ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ, ಮಾನ್ಯ ಭಾರತದ ಪ್ರಧಾನಮಂತ್ರಿಗಳಿಗೆ ಅವಮಾನವಾಗುವ ರೀತಿಯಲ್ಲಿ ಅಣಕು ಪ್ರದರ್ಶನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ದೇಶದ ಪ್ರಧಾನಮಂತ್ರಿ ಎನ್ನುವುದು ದೇಶದ ಗೌರವದ ಸ್ಥಾನವಾಗಿದ್ದು, ಆ ಸ್ಥಾನದಲ್ಲಿರುವ ವ್ಯಕ್ತಿಗೆ ಇಂತಹ ರೀತಿಯಲ್ಲಿ ಅಗೌರವ ತೋರಿಸುವುದು ಸರಿಯಾದ ಸಂಸ್ಕೃತಿ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಕುರಿತು ಸ್ವಯಂಪ್ರೇರಿತವಾಗಿ (ಸೂಮೊಟೋ) ಪ್ರಕರಣ ದಾಖಲಿಸಲಾಗುತ್ತದೆ ಎಂದು ನಿರೀಕ್ಷಿಸಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಆದ್ದರಿಂದ ಇವತ್ತಿನ ದಿನ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿ ಈ ಘಟನೆ ಕುರಿತು ಪ್ರಕರಣ ದಾಖಲಿಸುವಂತೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಮನವಿ ಹಾಗೂ ದೂರು ಸಲ್ಲಿಸಲಾಯಿತು. ಜೊತೆಗೆ ಎಸ್‌ಪಿ ಅವರ ಮುಖಾಂತರ ದೊಡ್ಡಪೇಟೆ ಪೊಲೀಸ್ ಠಾಣೆಗೆ ಅಗತ್ಯವಾದ ಸೂಚನೆ ನೀಡುವಂತೆ ವಿನಂತಿಸಲಾಯಿತು. ಇದೇ ವೇಳೆ ದೊಡ್ಡಪೇಟೆ ಸರ್ಕಲ್ ಇನ್ಸ್‌ಪೆಕ್ಟರ್ ಅವರಿಗೂ ಮನವಿ ಸಲ್ಲಿಸಿ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಲಾಯಿತು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತ್ ಕುಕ್ಕೆ ಅವರ ನೇತೃತ್ವದಲ್ಲಿ ಯುವ ಮೋರ್ಚಾ ತಂಡದಿಂದ ಮನವಿ ಹಾಗೂ ದೂರು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಯುವ ಮೋರ್ಚಾ ಜಿಲ್ಲಾ ಸಹ ಪ್ರಭಾರಿಗಳಾದ ಸಂತೋಷ್ ಹೊಳಲೂರು, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಸತೀಶ್ ರಾಮನಕೊಪ್ಪ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದರ್ಶನ್ ಆರ್ ವಿ ಹಾಗೂ ಅರುಣ್ ಕುಗ್ವೆ , ಶಿವಮೊಗ್ಗ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾದ ಅನಿಲ್ ಲೋಕಿನಕೊಪ್ಪ
ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಯುವರಾಜ್ ಎನ್.ವಿ. ಮತ್ತು ಹರೀಶ್ ನಾಯ್ಕ್ , ಜಿಲ್ಲಾ ಖಜಾಂಚಿಗಳಾದ ವಿವೇಕ್ ಹೆಬ್ಬಾರ್, ಜಿಲ್ಲಾ ಪದಾಧಿಕಾರಿಗಳಾದ ಕುಮಾರ್ ಆಯನೂರು, ಅಜಯ್ ಬೊಮ್ಮನಕಟ್ಟೆ, ಪವನ್, ಗಣೇಶ್ ಗುಂಡಗದ್ದೆ, ಅಮಿತ್ ಹೆಗ್ಗಾರ್ , ಶಶಿ , ಸತೀಶ್ ಸೇರಿದಂತೆ ಯುವ ಮೋರ್ಚಾದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...