Thursday, June 18, 2026
Thursday, June 18, 2026

S. Kumar Bangarappa ರಾಜ್ಯದಲ್ಲಿ ಬ್ಯಾಡ್ಮಿಂಟನ್ ಕ್ಷೇತ್ರ ಇನ್ನಷ್ಟು ಎತ್ತರಕ್ಕೇರಲಿ : ಎಸ್. ಕುಮಾರ್ ಬಂಗಾರಪ್ಪ

Date:

S. Kumar Bangarappa ಗ್ರಾಮೀಣ ಪ್ರದೇಶಗಳಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟ ಮಾತ್ರವಲ್ಲದೆ ಒಲಂಪಿಕ್ ಕ್ರೀಡೆಯಲ್ಲಿ ಪ್ರತಿನಿಧಿಸುವಂತಹ ಪ್ರತಿಭೆಗಳಿದ್ದಾರೆ. ರಾಜ್ಯದಲ್ಲಿ ಬ್ಯಾಡ್ಮಿಂಟನ್ ಕ್ಷೇತ್ರ ಇನ್ನಷ್ಟು ಎತ್ತರಕ್ಕೇರಲಿ ಎಂಬ ಉದ್ದೇಶ ಹೊಂದಲಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.

ಪಟ್ಟಣದ ಖಾಸಿಗಿ ಬಸ್ ನಿಲ್ದಾಣ ಸಮೀಪದ ಬಿಜೆಪಿ ಕಚೇರಿಯಲ್ಲಿ ಸೊರಬ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಕ್ರೀಡಾ ಕ್ಷೇತ್ರಕ್ಕೆ, ವಿಶೇಷವಾಗಿ ಬ್ಯಾಡ್ಮಿಂಟನ್ ಕ್ರೀಡೆಯ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಳೆದ ಏಳು ದಶಕಗಳಿಂದ ಸಾವಿರಾರು ಪ್ರತಿಭಾವಂತ ಆಟಗಾರರನ್ನು ರೂಪಿಸಿದೆ. ಪದ್ಮಶ್ರೀ ಪ್ರಕಾಶ್ ಪಡುಕೋಣೆ, ಲಕ್ಷ್ಯ ಸೇನ್ ಸೇರಿದಂತೆ ಅನೇಕ ಶ್ರೇಷ್ಠ ಆಟಗಾರರು ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದರು.

S. Kumar Bangarappa ಯುವ ಆಟಗಾರರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಅತ್ಯಾಧುನಿಕ ಮೂಲಸೌಕರ್ಯ, ವೈಜ್ಞಾನಿಕ ತರಬೇತಿ ಮತ್ತು ಸಮಗ್ರ ಬೆಂಬಲ ಅಗತ್ಯವಾಗಿದೆ. ತರಬೇತಿ ಕೇಂದ್ರಗಳ ಸ್ಥಾಪನೆ, ಜೊತೆಗೆ ಜಿಲ್ಲೆ ಮತ್ತು ಗ್ರಾಮೀಣ ಪ್ರದೇಶಗಳ ಪ್ರತಿಭೆಗಳ ಉತ್ತೇಜನಕ್ಕೆ ಸರ್ಕಾರದ ಸಹಕಾರವನ್ನು ನೀಡಬೇಕು. ಪಟ್ಟಣದ ಖಾಸಗಿ ಬಸ್ ನಿಲ್ದಾಣ ಮೇಲ್ಬಾಗದಲ್ಲಿ ಕ್ರೀಡಾಂಗಣ ನಿರ್ಮಿಸಲಾಗಿತ್ತು. ಅದಕ್ಕೆ ನೆಲ ಹಾಸು ಮಾಡಬೇಕಿದೆ. ಈ ಬಗ್ಗೆ ಸರ್ಕಾರ ಗಮನ ನೀಡಬೇಕು. ತಾಲೂಕಿನ ಬ್ಯಾಡ್ಮಿಂಟನ್ ಆಟಗಾರರು ಸಂಸ್ಥೆಯನ್ನು ನೋಂದಣಿ ಮಾಡಬೇಕು ಎಂದು ತಿಳಿಸಿದರು.

ಸೊರಬ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸೈಯದ್ ಅಕಿಲ್, ಕಾರ್ಯದರ್ಶಿ ಎಂ.ಪಿ. ರಾಘವೇಂದ್ರ, ಮುಹಮ್ಮದ್ ಯಾಸೀನ್, ಮುಹಮ್ಮದ್ ಸಫಾನ್, ಮುಹಮ್ಮದ್ ಆಸೀಫ್, ಅಬ್ದುಲ್ ಗಫಾರ್, ಸೈಯದ್ ಶಫೀರ್ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...