Sunday, August 2, 2026
Sunday, August 2, 2026

Madhu Bangarappa ಡಾ.ಅಂಬೇಡ್ಕರ್ ವಿದ್ಯಾರ್ಥಿ ನಿಲಯವು ಸಾವಿರಾರು ಬಾಲಕಿಯರ ಶಿಕ್ಷಣಕ್ಕೆ ಭದ್ರ ಆಸರೆ- ಮಧು ಬಂಗಾರಪ್ಪ

Date:

Madhu Bangarappa ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ “ಬೊಮ್ಮನಕಟ್ಟೆ ಹಾಗೂ ಊರುಗಡೂರು” ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ “ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ” ಕಟ್ಟಡವನ್ನು ಸನ್ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು ಉದ್ಘಾಟಿಸಿ, ಮಾತನಾಡಿದರು.

ಶಿಕ್ಷಣವು ಕೇವಲ ಅಕ್ಷರ ಜ್ಞಾನವಲ್ಲ, ಅದು ಬದುಕಿನ ದಾರಿ. ನಮ್ಮ ಗ್ರಾಮೀಣ ಭಾಗದ ಪ್ರತಿಭಾವಂತ ಹೆಣ್ಣುಮಕ್ಕಳು ಮೆಟ್ರಿಕ್ ನಂತರ ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶಗಳಿಗೆ ಬಂದಾಗ, ಅವರಿಗೆ ಎದುರಾಗುವ ಮೊದಲ ಸವಾಲೇ ಸುರಕ್ಷಿತ ವಸತಿ. ಆ ಕೊರತೆಯನ್ನು ನೀಗಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಇಂದು ಉದ್ಘಾಟನೆಗೊಂಡಿರುವ ಈ ವಿದ್ಯಾರ್ಥಿ ನಿಲಯವು ಕೇವಲ ಒಂದು ಕಟ್ಟಡವಾಗಿರದೇ ಇದು ಸಾವಿರಾರು ಬಾಲಕಿಯರ ಶೈಕ್ಷಣಿಕ ಕನಸುಗಳಿಗೆ ಭದ್ರವಾದ ಆಸರೆ ಕಲ್ಪಿಸಲಿದೆ. ಈ ಸುಸಜ್ಜಿತ ಮತ್ತು ಸುರಕ್ಷಿತವಾದ ಈ ಪರಿಸರದಲ್ಲಿ ನಮ್ಮ ವಿದ್ಯಾರ್ಥಿನಿಯರು ಯಾವುದೇ ಆತಂಕವಿಲ್ಲದೆ ವಿದ್ಯಾಭ್ಯಾಸ ಮಾಡಿ, ನಾಡಿನ ಹೆಮ್ಮೆಯ ಪ್ರಜೆಗಳಾಗಿ ಹೊರಹೊಮ್ಮಲಿ ಎನ್ನುವುದೇ ನನ್ನ ಆಶಯವಾಗಿದೆ ಎಂದು ತಿಳಿಸಿದರು.

Madhu Bangarappa ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್‌ ಬಾನು, ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಗೌಡ, ಶ್ರೀಮತಿ ಜಿ.ಪಲ್ಲವಿ, ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಸಿಇಓ ಶ್ರೀ ಹೇಮಂತ್ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...