Friday, May 1, 2026
Friday, May 1, 2026

ಶಿಕ್ಷಣ ಹಾಗೂ ದಾಸೋಹ ವ್ಯವಸ್ಥೆಯಿರುವ ಮಠಗಳಿಗೆ ಆದ್ಯತೆ ಮೇರೆಗೆ ಗ್ಯಾಸ್ ಸಿಲಿಂಡರ್ ಒದಗಿಸಲು ಮನವಿ

Date:

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ಆಶ್ರಯ, ಶಿಕ್ಷಣ ಹಾಗೂ ದಾಸೋಹದ ವ್ಯವಸ್ಥೆಯನ್ನು ಮಾಡುತ್ತಿರುವ ಮಠಗಳಿಗೆ ಮೊದಲ ಆದ್ಯತೆ ಮೇರೆಗೆ ಅಡುಗೆ ಅನಿಲ ಪೂರೈಕೆ ಮಾಡಬೇಕು ಎಂದು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದ ಗೌಡ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಶತಮಾನಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಜಾತಿ, ಮತಗಳ ಭೇದವಿಲ್ಲದೆ ಜ್ಞಾನವನ್ನು ನೀಡುತ್ತಿರುವ ಮಠಗಳ ಮೇಲೆಯೂ ಕೊಲ್ಲಿ ರಾಷ್ಟçಗಳ ಯದ್ಧದ ಪರಿಣಾಮ ಎದುರಾಗಿದೆ. ಸಮರ್ಪಕವಾಗಿ ಅಡುಗೆ ಅನಿಲ ದೊರೆಯದೇ ದಾಸೋಹಕ್ಕೆ ತೊಂದರೆಯಾಗುತ್ತಿದೆ. ಉತ್ತರ ಕರ್ನಾಟಕದ ಹಲವು ಮಠಗಳು ಸೌದೆಗೆ ಮೊರೆ ಹೋಗಿದ್ದು, ಇತ್ತ ಸೌದೆಯೂ ಅವಶ್ಯಕತೆಗೆ ತಕ್ಕಷ್ಟು ದೊರೆಯುತ್ತಿಲ್ಲ. ಮಠಗಳಿಗೆ ದುಸ್ಥಿತಿ ಎದುರಾಗಿದೆ ಎಂದಿದ್ದಾರೆ.
ಮಠಗಳು ಹಾಗೂ ಕೆಲ ಸಂಸ್ಥೆಗಳು ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರವನ್ನೂ ಕಲಿಸುತ್ತಿವೆ. ತ್ರಿವಿಧ ದಾಸೋಹ ಪದ್ಧತಿಯು ಶಿಕ್ಷಣದ ಸಮಾನತೆಗೆ ನಾಂದಿ ಹಾಡಿದೆ. ಇಂತಹ ಮಠಗಳಲ್ಲಿ ಆಹಾರ ತಯಾರಿಸಲು ಸಮರ್ಪಕವಾಗಿ ಅಡುಗೆ ಅನಿಲ ಪೂರೈಕೆ ಮಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಸರ್ಕಾರಗಳು ಮಾಡುವ ಕೆಲಸವನ್ನು ಯಾವುದೇ ಪ್ರತಿಫಲಾಕ್ಷೆ ಇಲ್ಲದೇ ಮಠಗಳು ಕಾರ್ಯ ನಿರ್ವಹಿಸುತ್ತಿವೆ. ಆದ್ದರಿಂದ ತ್ರಿವಿಧ ದಾಸೋಹದಲ್ಲಿ ತೊಡಗಿದ ಮಠಗಳಿಗೆ ಮೊದಲ ಆದ್ಯತೆ ಮೇರೆಗೆ ಅಡುಗೆ ಅನಿಲ ಪೂರೈಕೆ ಮಾಡಿದರೆ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...