Sunday, August 2, 2026
Sunday, August 2, 2026

ಶಿಕ್ಷಣ ಹಾಗೂ ದಾಸೋಹ ವ್ಯವಸ್ಥೆಯಿರುವ ಮಠಗಳಿಗೆ ಆದ್ಯತೆ ಮೇರೆಗೆ ಗ್ಯಾಸ್ ಸಿಲಿಂಡರ್ ಒದಗಿಸಲು ಮನವಿ

Date:

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ಆಶ್ರಯ, ಶಿಕ್ಷಣ ಹಾಗೂ ದಾಸೋಹದ ವ್ಯವಸ್ಥೆಯನ್ನು ಮಾಡುತ್ತಿರುವ ಮಠಗಳಿಗೆ ಮೊದಲ ಆದ್ಯತೆ ಮೇರೆಗೆ ಅಡುಗೆ ಅನಿಲ ಪೂರೈಕೆ ಮಾಡಬೇಕು ಎಂದು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದ ಗೌಡ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಶತಮಾನಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಜಾತಿ, ಮತಗಳ ಭೇದವಿಲ್ಲದೆ ಜ್ಞಾನವನ್ನು ನೀಡುತ್ತಿರುವ ಮಠಗಳ ಮೇಲೆಯೂ ಕೊಲ್ಲಿ ರಾಷ್ಟçಗಳ ಯದ್ಧದ ಪರಿಣಾಮ ಎದುರಾಗಿದೆ. ಸಮರ್ಪಕವಾಗಿ ಅಡುಗೆ ಅನಿಲ ದೊರೆಯದೇ ದಾಸೋಹಕ್ಕೆ ತೊಂದರೆಯಾಗುತ್ತಿದೆ. ಉತ್ತರ ಕರ್ನಾಟಕದ ಹಲವು ಮಠಗಳು ಸೌದೆಗೆ ಮೊರೆ ಹೋಗಿದ್ದು, ಇತ್ತ ಸೌದೆಯೂ ಅವಶ್ಯಕತೆಗೆ ತಕ್ಕಷ್ಟು ದೊರೆಯುತ್ತಿಲ್ಲ. ಮಠಗಳಿಗೆ ದುಸ್ಥಿತಿ ಎದುರಾಗಿದೆ ಎಂದಿದ್ದಾರೆ.
ಮಠಗಳು ಹಾಗೂ ಕೆಲ ಸಂಸ್ಥೆಗಳು ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರವನ್ನೂ ಕಲಿಸುತ್ತಿವೆ. ತ್ರಿವಿಧ ದಾಸೋಹ ಪದ್ಧತಿಯು ಶಿಕ್ಷಣದ ಸಮಾನತೆಗೆ ನಾಂದಿ ಹಾಡಿದೆ. ಇಂತಹ ಮಠಗಳಲ್ಲಿ ಆಹಾರ ತಯಾರಿಸಲು ಸಮರ್ಪಕವಾಗಿ ಅಡುಗೆ ಅನಿಲ ಪೂರೈಕೆ ಮಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಸರ್ಕಾರಗಳು ಮಾಡುವ ಕೆಲಸವನ್ನು ಯಾವುದೇ ಪ್ರತಿಫಲಾಕ್ಷೆ ಇಲ್ಲದೇ ಮಠಗಳು ಕಾರ್ಯ ನಿರ್ವಹಿಸುತ್ತಿವೆ. ಆದ್ದರಿಂದ ತ್ರಿವಿಧ ದಾಸೋಹದಲ್ಲಿ ತೊಡಗಿದ ಮಠಗಳಿಗೆ ಮೊದಲ ಆದ್ಯತೆ ಮೇರೆಗೆ ಅಡುಗೆ ಅನಿಲ ಪೂರೈಕೆ ಮಾಡಿದರೆ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...