Saturday, May 2, 2026
Saturday, May 2, 2026

ನೀರಿನ ಕಂದಾಯ ಪಾವತಿಗೆ ಮಾರ್ಚ್ 22 ರಂದು ವಿಶೇಷ ಕೌಂಟರ್ ವ್ಯವಸ್ಥೆ

Date:

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ಶಿವಮೊಗ್ಗ ಇವರ ವತಿಯಿಂದ 2025-26 ನೇ ಸಾಲಿನ ಮಾರ್ಚ್ 22 ರ ಭಾನುವಾರದಂದು ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ಕೆಳಕಂಡ ಸ್ಥಳಗಳಲ್ಲಿ ತೆರೆಯಲಾಗಿದೆ.
ರಾಗಿಗುಡ್ಡ ಕೊನೆ ಬಸ್‌ಸ್ಟಾಪ್ ಹತ್ತಿರ, ಗೋಪಾಳ ಕೊನೆ ಬಸ್‌ಸ್ಟಾಪ್ ಹತ್ತಿರ, ಗಾಂಧೀಬಜಾರ್ ಬಸವೇಶ್ವರ ದೇವಸ್ಥಾನದ ಆವರಣ, ಅಶೋಕನಗರ ನಂದಿನ ಬೂತ್, ಪೊಲೀಸ್ ಕ್ವಾಟ್ರಸ್ ಹತ್ತಿರ ಹಾಗೂ ಗಾಡಿಕೊಪ್ಪ ಸರ್ಕಾರಿ ಶಾಲೆ ಹತ್ತಿರ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ. ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ಅಂತಹವರ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕೆಂದು ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ...

Shivamogga District Police ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: ಡ್ರೋನ್ ಮೂಲಕ ಪತ್ತೆ. ಮೂವರ ಬಂಧನ.

Shivamogga District Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಬಾಹೀರ...