Sunday, August 2, 2026
Sunday, August 2, 2026

ಜಿಲ್ಲೆಯಲ್ಲಿ ಅನಿಲ ಸಿಲಿಂಡರ್ ಗೆ ಕೊರತೆಯಿಲ್ಲ, ಗ್ರಾಹಕರು ಸಾಮಾಜಿಕ ಜಾಲತಾಣಗಳ ವದಂತಿ ನಂಬಬೇಡಿ- ಪ್ರಭುಲಿಂಗ ಕವಳಿಕಟ್ಟಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ, ಆತಂಕ ಪಡದೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲೆಯ ಗ್ರಾಹಕರಿಗೆ ತಿಳಿಸಿದ್ದಾರೆ.

ಹೆಚ್ಚಿನ ಗ್ರಾಹಕರು ಒಂದು ರಿಫಿಲ್ಲಿಂಗ್ ಸಿಲಿಂಡರ್ ಪಡೆದ ನಂತರ ಸಿಂಗಲ್ ಗೃಹ ಬಳಕೆ ಸಿಲಿಂಡರ್‌ಗಾಗಿ 25 ದಿನಗಳ ಅಂತರದ ನಂತರ ಮತ್ತು ಡಬ್ಬಲ್ ಸಿಲಿಂಡರ್ ಗೃಹ ಬಳಕೆಯವರು 30 ದಿನಗಳ ನಂತರ ಮತ್ತೊಂದು ಸಿಲಿಂಡರ್‌ಗಾಗಿ ಬುಕ್ಕಿಂಗ್ ಮಾಡಬೇಕು. ಅದಕ್ಕೂ ಮುಂಚಿತವಾಗಿ ಬುಕ್ಕಿಂಗ್ ಮಾಡಬಾರದು. ಎಲ್.ಪಿ.ಜಿ ಅಡುಗೆ ಅನಿಲ ಸಿಲಿಂಡರ್‌ಗೆ ಸಂಬಂಧಿಸಿದಂತೆ ಉಪನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಶಿವಮೊಗ್ಗ ಇಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಮೊ.ಸಂ:9148267229 ಮತ್ತು 9844214270ಗೆ ಕರೆ ಮಾಡಿ ಗ್ರಾಹಕರು ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...