Sunday, May 3, 2026
Sunday, May 3, 2026

ಜಿಲ್ಲೆಯಲ್ಲಿ ಅನಿಲ ಸಿಲಿಂಡರ್ ಗೆ ಕೊರತೆಯಿಲ್ಲ, ಗ್ರಾಹಕರು ಸಾಮಾಜಿಕ ಜಾಲತಾಣಗಳ ವದಂತಿ ನಂಬಬೇಡಿ- ಪ್ರಭುಲಿಂಗ ಕವಳಿಕಟ್ಟಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ, ಆತಂಕ ಪಡದೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲೆಯ ಗ್ರಾಹಕರಿಗೆ ತಿಳಿಸಿದ್ದಾರೆ.

ಹೆಚ್ಚಿನ ಗ್ರಾಹಕರು ಒಂದು ರಿಫಿಲ್ಲಿಂಗ್ ಸಿಲಿಂಡರ್ ಪಡೆದ ನಂತರ ಸಿಂಗಲ್ ಗೃಹ ಬಳಕೆ ಸಿಲಿಂಡರ್‌ಗಾಗಿ 25 ದಿನಗಳ ಅಂತರದ ನಂತರ ಮತ್ತು ಡಬ್ಬಲ್ ಸಿಲಿಂಡರ್ ಗೃಹ ಬಳಕೆಯವರು 30 ದಿನಗಳ ನಂತರ ಮತ್ತೊಂದು ಸಿಲಿಂಡರ್‌ಗಾಗಿ ಬುಕ್ಕಿಂಗ್ ಮಾಡಬೇಕು. ಅದಕ್ಕೂ ಮುಂಚಿತವಾಗಿ ಬುಕ್ಕಿಂಗ್ ಮಾಡಬಾರದು. ಎಲ್.ಪಿ.ಜಿ ಅಡುಗೆ ಅನಿಲ ಸಿಲಿಂಡರ್‌ಗೆ ಸಂಬಂಧಿಸಿದಂತೆ ಉಪನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಶಿವಮೊಗ್ಗ ಇಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಮೊ.ಸಂ:9148267229 ಮತ್ತು 9844214270ಗೆ ಕರೆ ಮಾಡಿ ಗ್ರಾಹಕರು ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...