Thursday, June 18, 2026
Thursday, June 18, 2026

ಜಿಲ್ಲೆಯಲ್ಲಿ ಅನಿಲ ಸಿಲಿಂಡರ್ ಗೆ ಕೊರತೆಯಿಲ್ಲ, ಗ್ರಾಹಕರು ಸಾಮಾಜಿಕ ಜಾಲತಾಣಗಳ ವದಂತಿ ನಂಬಬೇಡಿ- ಪ್ರಭುಲಿಂಗ ಕವಳಿಕಟ್ಟಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ, ಆತಂಕ ಪಡದೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲೆಯ ಗ್ರಾಹಕರಿಗೆ ತಿಳಿಸಿದ್ದಾರೆ.

ಹೆಚ್ಚಿನ ಗ್ರಾಹಕರು ಒಂದು ರಿಫಿಲ್ಲಿಂಗ್ ಸಿಲಿಂಡರ್ ಪಡೆದ ನಂತರ ಸಿಂಗಲ್ ಗೃಹ ಬಳಕೆ ಸಿಲಿಂಡರ್‌ಗಾಗಿ 25 ದಿನಗಳ ಅಂತರದ ನಂತರ ಮತ್ತು ಡಬ್ಬಲ್ ಸಿಲಿಂಡರ್ ಗೃಹ ಬಳಕೆಯವರು 30 ದಿನಗಳ ನಂತರ ಮತ್ತೊಂದು ಸಿಲಿಂಡರ್‌ಗಾಗಿ ಬುಕ್ಕಿಂಗ್ ಮಾಡಬೇಕು. ಅದಕ್ಕೂ ಮುಂಚಿತವಾಗಿ ಬುಕ್ಕಿಂಗ್ ಮಾಡಬಾರದು. ಎಲ್.ಪಿ.ಜಿ ಅಡುಗೆ ಅನಿಲ ಸಿಲಿಂಡರ್‌ಗೆ ಸಂಬಂಧಿಸಿದಂತೆ ಉಪನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಶಿವಮೊಗ್ಗ ಇಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಮೊ.ಸಂ:9148267229 ಮತ್ತು 9844214270ಗೆ ಕರೆ ಮಾಡಿ ಗ್ರಾಹಕರು ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...