Tuesday, August 25, 2026
Tuesday, August 25, 2026

S. N. Channabasappa ಕೊಳಚೆ ಪ್ರದೇಶ ವಾಸಿಗಳಿಗೆ ಇರುವ ತಾಂತ್ರಿಕ ಅಡೆತಡೆ ನಿವಾರಿಸಿ,ಹಕ್ಕುಪತ್ರ ವಿತರಿಸಿ- ಎಸ್.ಎನ್.ಚನ್ನಬಸಪ್ಪ.

Date:

S. N. Channabasappa ಶಿವಮೊಗ್ಗ ನಗರದ 6 ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಇರುವ ತಾಂತ್ರಿಕ ಅಡೆತಡೆಗಳನ್ನು ತಕ್ಷಣ ನಿವಾರಿಸುವಂತೆ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ವಸತಿ ಸಚಿವರಿಗೆ ಒತ್ತಾಯಿಸಿದರು.

ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಶಾಸಕರು ಈ ವಿಷಯದ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಸಭಾಧ್ಯಕ್ಷರ ಸೂಚನೆಯಂತೆ ಇಂದು ವಿಧಾನಸೌಧದಲ್ಲಿ ವಸತಿ ಸಚಿವ ಶ್ರೀ ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಿತು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಖಾರಾಬು ಕಟ್ಟೆ, ಕೆರೆ ಅಂಗಳ ಹಾಗೂ ಸರ್ಕಾರಿ ಜಮೀನುಗಳಲ್ಲಿ ದಶಕಗಳಿಂದ ನೆಲೆಸಿರುವ ಕುಟುಂಬಗಳಿಗೆ ಕಾನೂನುಬದ್ಧ ಭದ್ರತೆ ಒದಗಿಸುವ ಕುರಿತು ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು.

S. N. Channabasappa ಸಭೆಯಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಲಿಕಟ್ಟಿ ಅವರು, ಜಮೀನು ಲಭ್ಯತೆ ಮತ್ತು ವರ್ಗಾವಣೆ ಪ್ರಕ್ರಿಯೆಯಲ್ಲಿರುವ ಕಾನೂನು ತೊಡಕುಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣ ಮತ್ತು ಹಕ್ಕುಪತ್ರ ವಿತರಣೆಗೆ ಆದ್ಯತೆ ನೀಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ವಸತಿ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಹಾಗೂ ಕೊಳಗೇರಿ ಮಂಡಳಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಡವರಿಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿರಬೇಕು ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...