Tuesday, August 25, 2026
Tuesday, August 25, 2026

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Date:

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ ಮೇಲೆ ಚಿರತೆ ದಾಳಿ ನಡೆಸಿದೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಡಗಂಟಿ ಗ್ರಾಮದ ಸುದೀಪ್, ಸಂಜೆ ಮುತ್ತಗಿ ಗ್ರಾಮ ಸಮೀಪದ ಮೆಕ್ಕೆಜೋಳದ ಜಮೀನಿಗೆ ಮೇವು ತರಲು ಹೋಗಿದ್ದಾಗ ಚಿರತೆ ದಿಢೀರ್ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಡಸನಹಳ್ಳಿ ಗ್ರಾಮದ ಮುತ್ತಣ್ಣ ಎಂಬುವರು ಶನಿವಾರ ಬೆಳಿಗ್ಗೆ ಗದ್ದೆಗೆ ನೀರು ಬಿಡುವುದಕ್ಕೆ ತೆರಳಿದ್ದಾಗ ಚಿರತೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನೂ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಸಂಜೆ ತಡಸನಹಳ್ಳಿ, ಅಡಗಂಟಿ ಗ್ರಾಮದ ನಡುವಿನ ಮುಖ್ಯರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಹೂವ್ಯನಾಯ್ಕ ಎಂಬುವರ ಮೇಲೂ ಚಿರತೆ ದಾಳಿ ನಡೆಸಲು ಯತ್ನಿಸಿದ್ದು, ಪ್ರಥಮ ಚಿಕಿತ್ಸೆ ಪಡೆದು ಅವರು ಮನೆಗೆ ತೆರಳಿದ್ದಾರೆ.
ತಡಸನಹಳ್ಳಿ, ಅಡಗಂಟಿ ಗ್ರಾಮದ ಜಮೀನಿನಲ್ಲಿ, ಮುತ್ತಗಿ ಕಿರು ಅರಣ್ಯ ಸೇರಿ ಮೂರು ಕಡೆ ಚಿರತೆ ಸೆರೆಗೆ ಬೋನ್ ಇಡಲಾಗಿದೆ.‌

Cheetah Attack ಚಿರತೆ ಮನುಷ್ಯನ ಮೇಲೆ ದಾಳಿ ಮಾಡುವುದು ಕಡಿಮೆ. ಅದು ಯಾವುದಾದರೂ ರೋಗದಿಂದ ಬಳಲುತ್ತಿರಬಹುದು ಅಥವಾ ವಿಚಲಿತವಾಗಿರುವ ಕಾರಣಕ್ಕೆ ಮನುಷ್ಯರ ಮೇಲೆ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ವಲಯ ಅರಣ್ಯಾಧಿಕಾರಿ ಜಾವಿದ್ ಅಂಗಡಿ ತಿಳಿಸಿದ್ದಾರೆ.

ಚಿರತೆ ದಾಳಿಯಿಂದಾಗಿ ಜನ ಆತಂಕಕ್ಕೊಳಗಾಗಿದ್ದು, ಜಮೀನಿಗೆ ತೆರಳುವುದಕ್ಕೆ ಹೆದರುತ್ತಿದ್ದಾರೆ. ಕೂಡಲೇ ಚಿರತೆ ಸೆರೆ ಹಿಡಿಯಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಜಮೀನಿಗೆ ತೆರಳುವ ಸಮಯದಲ್ಲಿ ರೈತರು ಎಚ್ಚರಿಕೆ ವಹಿಸಬೇಕು ಎಂದು ಅರಣ್ಯ ಇಲಾಖೆ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...