KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ ವರ್ಷ ಎರಡನೇ ಸಾವಾಗಿದೆ.
ಅರಳಸುರುಳಿ ಸಮೀಪದ ತಟ್ಟಿಕೇವಿ ಗ್ರಾಮದ ಮಹಿಳೆ ಗುಲಾಬಿ ಶೆಟ್ಟಿ ( 60) ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ರೋಗ
ಉಲ್ಬಣಗೊಂಡ ಸ್ಥಿತಿಯಲ್ಲಿ ಮಂಗಳವಾರ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಾಗಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ಅದೇ ದಿನ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ
ಫಲಕಾರಿಯಾಗದೆ ಕಳೆದ ಗುರುವಾರ ಸಾವನ್ನಪ್ಪಿದ್ದಾರೆ.
ಕಿಡ್ನಿ ಸಮಸ್ಯೆ ಕೂಡ ಇತ್ತು ಎಂದು
ಹೇಳಲಾಗಿದೆ. ಈ ಮೊದಲು ಕಟಗಾರು ಆಸ್ಪತ್ರೆ ವ್ಯಾಪ್ತಿಯ ಹೊನ್ನೇಕೇರಿಯ ಯುವಕ ಕೆಎಫ್ಡಿ ಸೋಂಕಿನಿಂದ ಸಾವನಪ್ಪಿದ್ದರು.
ತಾಲೂಕಿನಲ್ಲಿ 29 ಪ್ರಕರಣ ದಾಖಲಾಗಿದ್ದು,
ಜನವರಿಯಿಂದ ಈವರೆಗೆ ಇಬ್ಬರು ಮೃತರಾಗಿದ್ದಾರೆ.
KFD ಪ್ರಸ್ತುತ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ
5 ಮತ್ತು ಮಣಿಪಾಲ ಆಸ್ಪತ್ರೆಯಲ್ಲಿ 3 ಜನರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ
ಎಂದು ತಾಲೂಕು ವೈದ್ಯಾಧಿಕಾರಿ ಡಾ. ಅನಿಕೇತನ್ ತಿಳಿಸಿದ್ದಾರೆ.
ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ 5
ರೋಗಿಗಳಿದ್ದು, ಗುಣಮುಖರಾಗಿ ಮನೆಗೆ ಹೋಗಿದ್ದ ಇಬ್ಬರು ಮತ್ತೆ ಜ್ವರ ಮರುಕಳಿಸಿದ
ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
