Tuesday, August 25, 2026
Tuesday, August 25, 2026

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

Date:

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ ವರ್ಷ ಎರಡನೇ ಸಾವಾಗಿದೆ.

ಅರಳಸುರುಳಿ ಸಮೀಪದ ತಟ್ಟಿಕೇವಿ ಗ್ರಾಮದ ಮಹಿಳೆ ಗುಲಾಬಿ ಶೆಟ್ಟಿ ( 60) ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ರೋಗ
ಉಲ್ಬಣಗೊಂಡ ಸ್ಥಿತಿಯಲ್ಲಿ ಮಂಗಳವಾರ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಾಗಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ಅದೇ ದಿನ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ
ಫಲಕಾರಿಯಾಗದೆ ಕಳೆದ ಗುರುವಾರ ಸಾವನ್ನಪ್ಪಿದ್ದಾರೆ.
ಕಿಡ್ನಿ ಸಮಸ್ಯೆ ಕೂಡ ಇತ್ತು ಎಂದು
ಹೇಳಲಾಗಿದೆ. ಈ ಮೊದಲು ಕಟಗಾರು ಆಸ್ಪತ್ರೆ ವ್ಯಾಪ್ತಿಯ ಹೊನ್ನೇಕೇರಿಯ ಯುವಕ ಕೆಎಫ್‌ಡಿ ಸೋಂಕಿನಿಂದ ಸಾವನಪ್ಪಿದ್ದರು.

ತಾಲೂಕಿನಲ್ಲಿ 29 ಪ್ರಕರಣ ದಾಖಲಾಗಿದ್ದು,
ಜನವರಿಯಿಂದ ಈವರೆಗೆ ಇಬ್ಬರು ಮೃತರಾಗಿದ್ದಾರೆ.

KFD ಪ್ರಸ್ತುತ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ
5 ಮತ್ತು ಮಣಿಪಾಲ ಆಸ್ಪತ್ರೆಯಲ್ಲಿ 3 ಜನರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ
ಎಂದು ತಾಲೂಕು ವೈದ್ಯಾಧಿಕಾರಿ ಡಾ. ಅನಿಕೇತನ್‌ ತಿಳಿಸಿದ್ದಾರೆ.

ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ 5
ರೋಗಿಗಳಿದ್ದು, ಗುಣಮುಖರಾಗಿ ಮನೆಗೆ ಹೋಗಿದ್ದ ಇಬ್ಬರು ಮತ್ತೆ ಜ್ವರ ಮರುಕಳಿಸಿದ
ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...