Saturday, May 9, 2026
Saturday, May 9, 2026

ಪತ್ರಿಕಾ ವಿತರಕರಿಗೆ ಬದುಕಿದ್ದಾಗಲೇ ಆರೋಗ್ಯ ಪರಿಹಾರ & ವಿಮಾ ಸೌಲಭ್ಯ ನೀಡಿ- ಮಾಲತೇಶ್

Date:

ಪತ್ರಿಕಾ ವಿತರಕರಿಗೆ ಸತ್ತ ಮೇಲೆ ಅಪಘಾತ ವಿಮೆ ನೀಡುವ ಬದಲು ಇದ್ದಾಗ ಆರೋಗ್ಯ ಪರಿಹಾರ ಅಥವಾ ವಿಮೆಗಳನ್ನು ನೀಡಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಮಾಲತೇಶ್ ಮಾತನಾಡಿ
ಪ್ರತಿನಿತ್ಯ ಬೆಳಗಿನ ಜಾವ ಎಲ್ಲರೂ ಏಳುವ ಮುಂಚೆ ನಾವು ಸಮಾಜ ಮತ್ತು ಸರ್ಕಾರ, ರಾಜಕೀಯ ಗಣ್ಯರುಗಳ ಹಾಗೂ ರಾಜ್ಯ, ದೇಶ,ವಿದೇಶದ ಸುದ್ದಿಗಳನ್ನು ಹೊತ್ತು ತಂದು ಮನೆ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇವೆ ನಮ್ಮ ಜೀವನ ಶೋಚನೀಯವಾಗಿದೆ. ಅದೇ ರೀತಿ ನಮ್ಮ ರಾಜ್ಯಾಧ್ಯಕ್ಷ ಶಂಭುಲಿಂಗ ರವರಿಗೆ ಜಿ. ಬಿ ಸಿಂಡ್ರೋಮ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ ಕೂಡಲೆ ಸರ್ಕಾರ ಇತ್ತ ಪರಿಹಾರ ನೀಡಬೇಕು ಎಂದರು.

ಪತ್ರಿಕ ವಿತರಕ ಸಂಘದ ಗೌರವಾಧ್ಯಕ್ಷ ಹುಲಿಗಿ ಕೃಷ್ಣ ಮಾತನಾಡಿ, ಕನಿಷ್ಠ ಕಾರ್ಮಿಕ ಇಲಾಖೆ ಸೌಲಭ್ಯನೂ ಸಹ ನಮಗೆ ದೊರೆಯದೆ, ಅನ್ಯಾಯವಾಗಿದ್ದು ಎಲ್ಲಾ ಪತ್ರಿಕ ವಿತರಿಕರಿಗೂ ಆರೋಗ್ಯ ವಿಮೆ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಉಚಿತ ನೆರವಿನ ರೀತಿಯಲ್ಲಿ ಹೊಸ ಚಿಂತನೆ ಮಾಡಿ ಪತ್ರಿಕ ವಿತರಕರ ಜೀವನ ಸ್ಪೂರ್ತಿಯಾಗಿ ಎಂದರು.

ಜಯ ಕರ್ನಾಟಕ ಜನಪರ ವೇದಿಕೆ ಶಿಕಾರಿಪುರ ತಾಲೂಕು ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿ ಮಾತನಾಡಿ, ಪತ್ರಿಕಾ ವಿತರಕರ ಜೀವನ ಬಹಳಷ್ಟು ಕಷ್ಟದಲ್ಲಿದ್ದು ಸರ್ಕಾರ ವಿಶೇಷವಾದ ಅನುದಾನ ಮತ್ತು ಸೌಲಭ್ಯಗಳನ್ನು ನೀಡುವ ಮುಖಾಂತರ ಇಡೀ ದೇಶಕ್ಕೆ ಮಾದರಿಯಾಗಿ ಸಮಾಜದ ಹಾಗೂಹೋಗುಗಳ ವಿಷಯ ಮತ್ತು ಸುದ್ದಿಯನ್ನು ತಲುಪಿಸುವ ವಿತರಕರ ಬದುಕು ಕಟ್ಟಿಕೊಳ್ಳಲು ಹೊಸ ಕಾನೂನು ಜಾರಿಗೆ ತಂದ ಸಮಾಜಕ್ಕೆ ಸ್ಪೂರ್ತಿಯಾಗಿ ಎಂದು ಆಗ್ರಹಿಸಿದರು.

ಪ್ರಧಾನ ಕಾರ್ಯದರ್ಶಿ ನಜೀರ್ ಅಹ್ಮದ್, ಪದಾಧಿಕಾರಿಗಳಾದ ಪರಶುರಾಮ್ ರಾವ್, ಮಲ್ಲಿಕಾರ್ಜುನ್ ಭದ್ರಾವತಿ , ಪಾರ್ಥಿಬನ್, ರಾಮು ಜಿ, ಚಂದ್ರಶೇಖರ್, ಪ್ರತಾಪ್, ಶರತ್, ಧನಂಜಯ್, ಅಜೀ ಉಲ್ಲಾ, ಪ್ರಾಣೇಶ್, ಸಂಗಮೇಶ್ವರ್, ಜಯ ಕರ್ನಾಟಕ ಜನಪರ ವೇದಿಕೆಯ ತಾಲೂಕು ಕಾರ್ಯದರ್ಶಿ ಇಮ್ರಾನ್, ಕರವೇ ಜನಮನ ರಾಜ್ಯ ಸಂಘಟನೆ ಪದಾಧಿಕಾರಿಗಳು, ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...