Thursday, March 26, 2026
Thursday, March 26, 2026

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Date:

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಗಳವರ ಕೃಪಾಶೀರ್ವಾದಗಳೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ, ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಇಲ್ಲಿನ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ 27 ನೇ ವಾರ್ಷಿಕೋತ್ಸವ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆ, ಶರಾವತಿ ನಗರ, ಶಿವಮೊಗ್ಗ ಇಲ್ಲಿ ಕಾರ್ಯಕ್ರಮ ನಡೆಯಲಿದ್ದು, ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕೂಡ ನಡೆಯುವುದು.1998 ರಂದು ನಿರ್ಮಿಸಿದ ಶ್ರೀ ಆದಿಚುಂಚನಗಿರಿ ಸಮುದಾಯಭವನ ಉದ್ಘಾಟನೆ ದಿನದಿಂದ ಆರಂಭಗೊಂಡ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಇಂದು 27ರ ಸಂಭ್ರಮ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಶಿವಮೊಗ್ಗ ಶಾಖೆಯಲ್ಲಿ ನಡೆಯುವ ಈ ಶುಭ ವಿವಾಹ ಅಂದಿನಿಂದ ಇಂದಿನವರೆಗೆ ಸರಿಸುಮಾರು 750 ಕ್ಕಿಂತ ಹೆಚ್ಚು ದಾಂಪತ್ಯ ಜೀವನಗಳನ್ನು ಕಟ್ಟಿಕೊಟ್ಟಿದೆ.

ಇಂದಿನ ಪ್ರತಿ ವಿವಾಹ ಮಹೋತ್ಸವದ ವಿಶೇಷತೆ ಎಂದರೆ ಮದುವೆಯಾಗುವ ವಧು ವರರಿಗೆ ವಿವಾಹಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠವೇ ನೀಡುತ್ತದೆ. ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ ನೀಡಿದರೆ, ಗಂಡಿಗೆ ಅಂಗಿ, ಪಂಚೆ, ಕಲ್ಪವೃಕ್ಷ ನೀಡುತ್ತಾರೆ.
ಪೂಜ್ಯಸದ್ಗುರು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಇಂತಹ ಉಚಿತ ಸಾಮೂಹಿಕ ವಿವಾಹ ಸಮಾರಂಭಗಳನ್ನು ಎಂತಹುದೇ ಸಂದರ್ಭದಲ್ಲಿ ನಿಲ್ಲಿಸದೇ ಕಳೆದ 26 ವರ್ಷಗಳಿಂದ ನಿರಂತರವಾಗಿ, ವೈಭವಯುತವಾಗಿ ನಡೆಸಿಕೊಂಡು ಬರುತ್ತಿರುವ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಶಾಖಾಮಠದ ಪ್ರಯತ್ನ ಶ್ಲಾಘನೀಯ ಹಾಗೂ ಗೌರವಾನ್ವಿತವಾದುದೇ ಹೌದು.

Adichunchanagiri Mutt ಈ ಬಾರಿಯ 27ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಏಪ್ರಿಲ್01 ರಂದು ಬೆಳಿಗ್ಗೆ 5:30 ರಿಂದ ಶ್ರೀ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ ಸ್ವಾಮಿಗೆ ಹೋಮ ಹವನಾದಿಗಳೊಂದಿಗೆ ಕುಂಭಾಭಿಷೇಕ, ಮಹಾಮಂಗಳಾರತಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ನಂತರ ಬೆಳಿಗ್ಗೆ 8 ಗಂಟೆಗೆ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಸಹ ಇದೇ ಸ್ಥಳದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸಾನ ಶಾಖಾ ಮಠದ ಪೂಜ್ಯರು ಉಪಸ್ಥಿತರಿರುವರು .ಈ ಎಲ್ಲಾ ಕಾರ್ಯಕ್ರಮದಲ್ಲಿ.ನಗರದ ನಾಗರಿಕರು ಹಾಗೂ ಪೋಷಕ ಬಂಧುಗಳು ಹಾಗೂ ಶ್ರೀ ಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶುಭ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...