Friday, March 27, 2026
Friday, March 27, 2026

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

Date:

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ “ಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಒಕ್ಕೂಟ” ದವರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಯಿತು.

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿರಬೇಕು ಮತ್ತು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಮೇಲೆ ಅನ್ಯ ಭಾಷೆಯ ಹೇರಿಕೆ ಇರಬಾರದು ಎಂಬುದು ನಮ್ಮ ಸರ್ಕಾರದ ಸ್ಪಷ್ಟ ನಿಲುವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

“ಪಾಸ್ ವಿಥೌಟ್ ಹಿಂದಿ” (Pass Without Hindi) ಶಾಲಾ ಹಂತದಲ್ಲಿ ಹಿಂದಿ ವಿಷಯದಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರಬಾರದು ಮತ್ತು ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಬಾರದು ಎಂಬ ಕಾನೂನು ಜಾರಿಗೊಳಿಸುವ ಕುರಿತು ಒಕ್ಕೂಟವು ಒತ್ತಾಯಿಸಿ, ಸಲ್ಲಿಸಿರುವ ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಲಾಗಿದ್ದು, ಈ ಕುರಿತು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಶಿಕ್ಷಣ ಇಲಾಖೆಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇಲಾಖೆಯ ಕ್ರಮದ ಬಗ್ಗೆ ಮಧು ಬಂಗಾರಪ್ಪ ಚರ್ಚೆಯಲ್ಲಿ ತಿಳಿಸಿದರು.

MADHU BANGARAPPA ಕನ್ನಡ ಪರ ಸಂಘಟನೆಗಳು ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಾಂತಿಯುತವಾಗಿ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು .ಇದಕ್ಕೆ‌ಚರ್ಚೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದರು.

ನಮ್ಮ ನೆಲ, ನಮ್ಮ ಭಾಷೆ ಮತ್ತು ನಮ್ಮ ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಅನ್ಯ ಭಾಷೆಯ ಹೇರಿಕೆಯನ್ನು ಸಹಿಸುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು

ಈ ಸಂದರ್ಭದಲ್ಲಿ ಹಿರಿಯ ಕನ್ನಡ ಪರ ಹೋರಾಟಗಾರರಾದ ಶ್ರೀ ಸಾ.ರ ಗೋವಿಂದ್, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ಶ್ರೀ ಶಿವರಾಮೇಗೌಡ, ಶ್ರೀ ರಾಧಾಕೃಷ್ಣ, ಶ್ರೀ ರಾಮಪ್ರಸಾದ್, ಶ್ರೀ ಪಾರ್ವತೀಶ್ ಸೇರಿದಂತೆ ಅನೇಕ ಪದಾಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...

Online shopping ಆನ್ ಲೈನ್ ಶಾಪಿಂಗ್ ಬಗ್ಗೆ ಬಹಳ ಜಾಗರೂಕರು ಹಾಗು ಜಾಣರಾಗಿರಿ- ಟಿ.ಶಿವಣ್ಣ.

Online shopping ಇತ್ತೀಚಿನ ಕಾಲಮಾನದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದೆ. ಆನ್‌ಲೈನ್ ಶಾಪಿಂಗ್...

Shivamogga-Bangalore Train ಬೆಂಗಳೂರು- ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ಗೆ ಹೊಸ ಕೋಚ್ ಗಳ ಸೇರ್ಪಡೆ-ಸಂಸದ ಬಿ.ವೈ.ರಾಘವೇಂದ್ರ.

Shivamogga-Bangalore Train ಬೆಂಗಳೂರು ಮತ್ತು ತಾಳಗುಪ್ಪ ನಡುವೆ ಸಂಚರಿಸುವ ರೈಲು ಸಂಖ್ಯೆ...