Saturday, March 28, 2026
Saturday, March 28, 2026

Davangere By Election ಸಾದಿಕ್ ಪೈಲ್ವಾನ್ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ.

Date:

Davangere By Election ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ

ಅವರು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ.
ನಿನ್ನೆ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಎಲ್ಲರಿಗೂ ಧನ್ಯವಾದಗಳು. ‌

Davangere By Election ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ್ದರಿಂದ ನಾನು ಖುದ್ದು ಭೇಟಿ ನೀಡಲಾಗಿಲ್ಲ.

ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು. ದಾವಣಗೆರೆಯಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದು, ಸಮುದಾಯದವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹೈಕಮಾಂಡ್ ಇದನ್ನು ಪರಿಶೀಲಿಸಿ ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಿದೆ ಎಂದು ಸಿದ್ಧರಾಮಯ್ಯ ಪಕ್ಷದ ನಿಲುವನ್ನ ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ...

CM Siddharamaih ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ- ಮುಖ್ಯಮಂತ್ರಿ ಸಿದ್ಧರಾಮಯ್ಯ.

CM Siddharamaih ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಜನ...