Monday, May 25, 2026
Monday, May 25, 2026

Dr. Dhananjaya Sarji ಅನುದಾನಿತ ಕಾಲೇಜುಗಳಲ್ಲಿ ಭಾಷಾವಿಷಯಕ್ಕೆ ಸಂಬಂಧಿಸಿದ ನಿಯಮ ಸಡಿಲಿಕೆಗೆ ಮನವಿ- ಡಾ.ಧನಂಜಯ ಸರ್ಜಿ.

Date:

Dr. Dhananjaya Sarji ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಭಾಷಾ ವಿಷಯಗಳ ಆಯ್ಕೆಗೆ ಸಂಬಂಧಿಸಿದಂತೆ ಜಾರಿಗೆ ತರಲಾಗಿರುವ ಕನಿಷ್ಠ 40 ವಿದ್ಯಾರ್ಥಿಗಳ ಸಂಖ್ಯೆಯ ನಿಯಮವನ್ನು ಸಡಿಲಗೊಳಿಸುವಂತೆ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಚರ್ಚಿಸಿದರು.

ಸರ್ಕಾರದ ಇತ್ತೀಚಿನ ನಿಯಮದಂತೆ ಪ್ರತಿ ವಿಭಾಗಕ್ಕೆ 40 ವಿದ್ಯಾರ್ಥಿಗಳಿರಬೇಕು ಎಂಬ ಷರತ್ತು ಭಾಷಾ ವಿಷಯಗಳಿಗೂ ಅನ್ವಯವಾಗುತ್ತಿರುವುದು ಪ್ರಾಯೋಗಿಕವಾಗಿ ಅನೇಕ ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ಒಂದು ವಿಭಾಗದಲ್ಲಿ ಒಟ್ಟು 40 ವಿದ್ಯಾರ್ಥಿಗಳಿದ್ದಾಗ, ಅವರು ತಮ್ಮ ಇಷ್ಟದ ವಿವಿಧ ಭಾಷೆಗಳನ್ನು ಹಂಚಿಕೊಂಡರೆ, ಯಾವುದೇ ಒಂದು ಭಾಷಾ ವಿಷಯಕ್ಕೆ ಕನಿಷ್ಠ 40 ವಿದ್ಯಾರ್ಥಿಗಳು ಸಿಗುವುದು ಅಸಾಧ್ಯದ ಮಾತು. ಈ ನಿಯಮದಿಂದಾಗಿ ಭಾಷಾ ಉಪನ್ಯಾಸಕರಿಗೆ ಕಾರ್ಯಭಾರದ ಕೊರತೆ ಉಂಟಾಗಿ, ಅವರು ಅನಿವಾರ್ಯವಾಗಿ ಬೇರೆ ಕಾಲೇಜುಗಳಿಗೆ ನಿಯೋಜನೆಗೊಳ್ಳುವ (Deputation) ಭೀತಿ ಎದುರಾಗಿದೆ. ಅಲ್ಲದೆ, ಖಾಲಿ ಇರುವ ಭಾಷಾ ವಿಷಯಗಳ ಹುದ್ದೆಗಳನ್ನು ಭರ್ತಿ ಮಾಡಲು ಈ ತಾಂತ್ರಿಕ ನಿಯಮವು ದೊಡ್ಡ ಅಡ್ಡಿಯಾಗಿದೆ ಎಂಬ ವಿಷಯವನ್ನ ಸಚಿವರ ಗಮನಕ್ಕೆ ಡಾ.ಧನಂಜಯ ಸರ್ಜಿ ತಂದರು.
ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಭಾಷೆಯನ್ನು ಕಲಿಯುವ ಸ್ವಾತಂತ್ರ್ಯ ಸಿಗಬೇಕು ಮತ್ತು ಭಾಷಾ ಉಪನ್ಯಾಸಕರ ವೃತ್ತಿ ಜೀವನಕ್ಕೆ ಭದ್ರತೆ ಒದಗಿಸಬೇಕು ಎಂಬ ಉದ್ದೇಶದಿಂದ, ಈ ಕೂಡಲೇ ಈ ನಿಯಮದಲ್ಲಿ ಬದಲಾವಣೆ ತರಬೇಕೆಂದು ಸಚಿವರಲ್ಲಿ ಮನವಿಮಾಡಿದರು.

Dr. Dhananjaya Sarji ಈ ವೇಳೆ ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್ ಭೋಜೇಗೌಡ ಅವರು, ಕಿಶೋರ್ ಕುಮಾರ್ ಪುತ್ತೂರು ಅವರು, ಶಾಲಾ ಮತ್ತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಯ ಪದಾಧಿಕಾರಿಗಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...