Wednesday, August 26, 2026
Wednesday, August 26, 2026

Dr. Dhananjaya Sarji ಅನುದಾನಿತ ಕಾಲೇಜುಗಳಲ್ಲಿ ಭಾಷಾವಿಷಯಕ್ಕೆ ಸಂಬಂಧಿಸಿದ ನಿಯಮ ಸಡಿಲಿಕೆಗೆ ಮನವಿ- ಡಾ.ಧನಂಜಯ ಸರ್ಜಿ.

Date:

Dr. Dhananjaya Sarji ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಭಾಷಾ ವಿಷಯಗಳ ಆಯ್ಕೆಗೆ ಸಂಬಂಧಿಸಿದಂತೆ ಜಾರಿಗೆ ತರಲಾಗಿರುವ ಕನಿಷ್ಠ 40 ವಿದ್ಯಾರ್ಥಿಗಳ ಸಂಖ್ಯೆಯ ನಿಯಮವನ್ನು ಸಡಿಲಗೊಳಿಸುವಂತೆ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಚರ್ಚಿಸಿದರು.

ಸರ್ಕಾರದ ಇತ್ತೀಚಿನ ನಿಯಮದಂತೆ ಪ್ರತಿ ವಿಭಾಗಕ್ಕೆ 40 ವಿದ್ಯಾರ್ಥಿಗಳಿರಬೇಕು ಎಂಬ ಷರತ್ತು ಭಾಷಾ ವಿಷಯಗಳಿಗೂ ಅನ್ವಯವಾಗುತ್ತಿರುವುದು ಪ್ರಾಯೋಗಿಕವಾಗಿ ಅನೇಕ ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ಒಂದು ವಿಭಾಗದಲ್ಲಿ ಒಟ್ಟು 40 ವಿದ್ಯಾರ್ಥಿಗಳಿದ್ದಾಗ, ಅವರು ತಮ್ಮ ಇಷ್ಟದ ವಿವಿಧ ಭಾಷೆಗಳನ್ನು ಹಂಚಿಕೊಂಡರೆ, ಯಾವುದೇ ಒಂದು ಭಾಷಾ ವಿಷಯಕ್ಕೆ ಕನಿಷ್ಠ 40 ವಿದ್ಯಾರ್ಥಿಗಳು ಸಿಗುವುದು ಅಸಾಧ್ಯದ ಮಾತು. ಈ ನಿಯಮದಿಂದಾಗಿ ಭಾಷಾ ಉಪನ್ಯಾಸಕರಿಗೆ ಕಾರ್ಯಭಾರದ ಕೊರತೆ ಉಂಟಾಗಿ, ಅವರು ಅನಿವಾರ್ಯವಾಗಿ ಬೇರೆ ಕಾಲೇಜುಗಳಿಗೆ ನಿಯೋಜನೆಗೊಳ್ಳುವ (Deputation) ಭೀತಿ ಎದುರಾಗಿದೆ. ಅಲ್ಲದೆ, ಖಾಲಿ ಇರುವ ಭಾಷಾ ವಿಷಯಗಳ ಹುದ್ದೆಗಳನ್ನು ಭರ್ತಿ ಮಾಡಲು ಈ ತಾಂತ್ರಿಕ ನಿಯಮವು ದೊಡ್ಡ ಅಡ್ಡಿಯಾಗಿದೆ ಎಂಬ ವಿಷಯವನ್ನ ಸಚಿವರ ಗಮನಕ್ಕೆ ಡಾ.ಧನಂಜಯ ಸರ್ಜಿ ತಂದರು.
ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಭಾಷೆಯನ್ನು ಕಲಿಯುವ ಸ್ವಾತಂತ್ರ್ಯ ಸಿಗಬೇಕು ಮತ್ತು ಭಾಷಾ ಉಪನ್ಯಾಸಕರ ವೃತ್ತಿ ಜೀವನಕ್ಕೆ ಭದ್ರತೆ ಒದಗಿಸಬೇಕು ಎಂಬ ಉದ್ದೇಶದಿಂದ, ಈ ಕೂಡಲೇ ಈ ನಿಯಮದಲ್ಲಿ ಬದಲಾವಣೆ ತರಬೇಕೆಂದು ಸಚಿವರಲ್ಲಿ ಮನವಿಮಾಡಿದರು.

Dr. Dhananjaya Sarji ಈ ವೇಳೆ ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್ ಭೋಜೇಗೌಡ ಅವರು, ಕಿಶೋರ್ ಕುಮಾರ್ ಪುತ್ತೂರು ಅವರು, ಶಾಲಾ ಮತ್ತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಯ ಪದಾಧಿಕಾರಿಗಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...